ಶಾಸಕ ರಾಮದಾಸ್‌ಗೆ ಸಿಗುತ್ತಾ BSY ಸಂಪುಟದಲ್ಲಿ ಸ್ಥಾನ ?

Kannadaprabha News   | Asianet News
Published : Sep 21, 2020, 11:45 AM ISTUpdated : Sep 21, 2020, 12:00 PM IST
ಶಾಸಕ ರಾಮದಾಸ್‌ಗೆ ಸಿಗುತ್ತಾ BSY ಸಂಪುಟದಲ್ಲಿ ಸ್ಥಾನ ?

ಸಾರಾಂಶ

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಆಕಾಂಕ್ಷಿಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. 

ಮೈಸೂರು (ಸೆ.21):  ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು 63ನೇ ವಾರ್ಡ್‌ನ ಬಿಜೆಪಿ ಉಸ್ತುವಾರಿ ಎಚ್‌.ಸಿ. ದೇವರಾಜೇಗೌಡ ಒತ್ತಾಯಿಸಿದ್ದಾರೆ. 

ಪಕ್ಷದ ಶಿಸ್ತಿನ ಸಿಪಾಯಿಯಂತೆ ಕಾರ್ಯ ನಿರ್ವಹಿಸುತ್ತಿರುವ ರಾಮದಾಸ್‌ ಅವರು ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೈಸೂರು ಭಾಗಕ್ಕೆ ಉತ್ತಮ ಕೆಲಸಗಳಿಗೆ ಒತ್ತು ನೀಡಿದ್ದಾರೆ. ಅಲ್ಪಸಂಖ್ಯಾತರು ಮತ್ತು ಬಡವ ದೀನ ದಲಿತರ ಪರವಾಗಿ ಕೆಲಸ ಮಾಡಿದ್ದು, ಕೆ.ಆರ್‌. ಕ್ಷೇತ್ರವನ್ನು ಕೊರೋನಾ ಮುಕ್ತವನ್ನಾಗಿಸಲು ಶ್ರಮಿಸಿದ್ದಾರೆ.

ರಾಜ್ಯದಲ್ಲಿ ಮಳೆಯಬ್ಬರ : ಸರ್ಕಾರದ ವಿರುದ್ಧ ಕೈ ಸಮರ ...

 ಲಾಕ್‌ಡೌನ್‌ ಸಂದರ್ಭದಲ್ಲಿ 6 ರಿಂದ 7 ಸಾಇರ ಆಹಾರ ಪೊಟ್ಟಣ ನೀಡಿದ್ದಾರೆ. ಎಲ್ಲಾ ವರ್ಗದ ಜನರ ಪ್ರೀತಿ ಗಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳಿಸಿದ್ದಾರೆ. ಅವರನ್ನು ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವರನ್ನಾಗಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

PREV
click me!

Recommended Stories

ಮೈಷುಗರ್ ಕಾರ್ಖಾನೆ ಅವ್ಯವಹಾರ, ಮಹಾರಾಷ್ಟ್ರದ ಅಧಿಕಾರಿಯ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಕರ್ನಾಟಕ ಆದೇಶ
ಉಡುಪಿ: ಬಂಗಡೆ ಮೀನು ಕೊಟ್ಟು ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾಗೆ ಅದ್ಧೂರಿ ಸ್ವಾಗತ