ಶಾಸಕ ರಾಮದಾಸ್‌ಗೆ ಸಿಗುತ್ತಾ BSY ಸಂಪುಟದಲ್ಲಿ ಸ್ಥಾನ ?

By Kannadaprabha NewsFirst Published Sep 21, 2020, 11:45 AM IST
Highlights

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಆಕಾಂಕ್ಷಿಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. 

ಮೈಸೂರು (ಸೆ.21):  ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು 63ನೇ ವಾರ್ಡ್‌ನ ಬಿಜೆಪಿ ಉಸ್ತುವಾರಿ ಎಚ್‌.ಸಿ. ದೇವರಾಜೇಗೌಡ ಒತ್ತಾಯಿಸಿದ್ದಾರೆ. 

ಪಕ್ಷದ ಶಿಸ್ತಿನ ಸಿಪಾಯಿಯಂತೆ ಕಾರ್ಯ ನಿರ್ವಹಿಸುತ್ತಿರುವ ರಾಮದಾಸ್‌ ಅವರು ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೈಸೂರು ಭಾಗಕ್ಕೆ ಉತ್ತಮ ಕೆಲಸಗಳಿಗೆ ಒತ್ತು ನೀಡಿದ್ದಾರೆ. ಅಲ್ಪಸಂಖ್ಯಾತರು ಮತ್ತು ಬಡವ ದೀನ ದಲಿತರ ಪರವಾಗಿ ಕೆಲಸ ಮಾಡಿದ್ದು, ಕೆ.ಆರ್‌. ಕ್ಷೇತ್ರವನ್ನು ಕೊರೋನಾ ಮುಕ್ತವನ್ನಾಗಿಸಲು ಶ್ರಮಿಸಿದ್ದಾರೆ.

ರಾಜ್ಯದಲ್ಲಿ ಮಳೆಯಬ್ಬರ : ಸರ್ಕಾರದ ವಿರುದ್ಧ ಕೈ ಸಮರ ...

 ಲಾಕ್‌ಡೌನ್‌ ಸಂದರ್ಭದಲ್ಲಿ 6 ರಿಂದ 7 ಸಾಇರ ಆಹಾರ ಪೊಟ್ಟಣ ನೀಡಿದ್ದಾರೆ. ಎಲ್ಲಾ ವರ್ಗದ ಜನರ ಪ್ರೀತಿ ಗಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳಿಸಿದ್ದಾರೆ. ಅವರನ್ನು ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವರನ್ನಾಗಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

click me!