'ದೇವೇಗೌಡರಿಗೆ ರಾತ್ರಿ ವೇಳೆ ನಾಯಕರನ್ನು ಭೇಟಿಯಾಗುವ ಚಾಳಿ ಇದೆ'

Published : Jan 09, 2019, 04:01 PM ISTUpdated : Jan 09, 2019, 07:09 PM IST
'ದೇವೇಗೌಡರಿಗೆ ರಾತ್ರಿ ವೇಳೆ ನಾಯಕರನ್ನು ಭೇಟಿಯಾಗುವ ಚಾಳಿ ಇದೆ'

ಸಾರಾಂಶ

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ.

ವಿಜಯಪುರ,(ಜ.9): ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಭಸ್ಮಾಸುರ ಎಂದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಇಂದು (ಬುಧವಾರ) BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಕಾಂಗ್ರೆಸ್ ತಲೆ ಮೇಲೆ ಕೈ ಇಟ್ಟಿರುವ JDS ವರಿಷ್ಠ ದೇವೇಗೌಡರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಂಬಲೇಬಾರದು. ದೇವೇಗೌಡರಿಗೆ ರಾತ್ರಿ ವೇಳೆ ನಾಯಕರನ್ನು ಭೇಟಿಯಾಗುವ ಚಾಳಿ ಇದೆ ಎಂದು ಕಿಡಿಕಾರಿದರು.

ದೇವೇಗೌಡ ಆಟ ಬಲ್ಲವರು ಎಂದ ಬಸನಗೌಡಪಾಟೀಲ್ ಯತ್ನಾಳ್, ಇವರ ಆಟದ ಬಗ್ಗೆ ಬಿಜೆಪಿ ನಾಯಕರು ಎಚ್ಚರವಹಿಸಬೇಕು.

ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿ ಜೆಡಿಎಸ್ ನವರ ಕಾಲಿಗೆ ಬೀಳುತ್ತಿದ್ದಾರೆ ಎಂದು ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV
click me!

Recommended Stories

ವಿಜಯಪುರ: ಕಬ್ಬು ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ದುರ್ಮರಣ
Breaking: ವಿಜಯಪುರದಲ್ಲಿ ಐದು ಖಾಸಗಿ ಬಸ್‌ಗಳ ಸರಣಿ ಅಪಘಾತ; ತಪ್ಪಿದ ಅನಾಹುತ!