ಮಂಡ್ಯ ಲೋಕಸಭೆ ಗೆಲ್ಲಲು ಬಿಜೆಪಿ ಸೂಪರ್ ಮಾಸ್ಟರ್ ಪ್ಲಾನ್

Oct 14, 2018, 5:58 PM IST

ಬಿಜೆಪಿ ಪ್ರಾಬಲ್ಯವಿಲ್ಲದ ಮಂಡ್ಯದಲ್ಲಿ ಖಾತೆ ತೆರೆಯಲು ಕಮಲ ಪಕ್ಷ ಮಾಸ್ಟರ್ ಪ್ಲಾನ್ ಮಾಡಿದ್ದು ಸ್ವರಾಜ್ ಇಂಡಿಯಾ ಪಕ್ಷದಿಂದ ಸುನಿತಾ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದು ಬಂಡಾಯ ಕಾಂಗ್ರೆಸಿಗರ ಪ್ಲಾನ್'ಗೆ ಬೆಂಬಲ ನೀಡಲು ಬಿಜೆಪಿ ಮುಂದಾಗಿದೆ. ಇದಲ್ಲದೆ ಅಭ್ಯರ್ಥಿ ಕಣಕ್ಕಿಳಿಸದೆ ಕಾಂಗ್ರೆಸ್ ಬಂಡಾಯಗಾರರರಿಗೆ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಭ್ಯರ್ಥಿಯನ್ನು ನಿಲ್ಲಿಸದೆ ಸುನಿತಾ ಅವರನ್ನು ಬೆಂಬಲಿಸಿದರೆ ಜೆಡಿಎಸ್ ಅನ್ನು ಸೋಲಿಸಬಹುದು ಎನ್ನುವ ಲೆಕ್ಕಾಚಾರ ರಾಜ್ಯ ಬಿಜೆಪಿ ನಾಯಕರದು.