ಹಿರೇಕೆರೂರ: ಮಳೆ ಹಾನಿ ಪರಿಶೀಲಿಸಿದ ಶಾಸಕ ಬಿ.ಸಿ. ಪಾಟೀಲ

Kannadaprabha News   | Asianet News
Published : Aug 04, 2021, 08:27 AM IST
ಹಿರೇಕೆರೂರ: ಮಳೆ ಹಾನಿ ಪರಿಶೀಲಿಸಿದ ಶಾಸಕ ಬಿ.ಸಿ. ಪಾಟೀಲ

ಸಾರಾಂಶ

*  ಚಿಕ್ಕೇರೂರ ಗ್ರಾಮದ ಹೊರವಲಯದ ಬೈಪಾಸ್‌ ರಸ್ತೆಯಲ್ಲಿನ ಮೇಲ್ಸೆತುವೆ ಕುಸಿತ *  ಮಳೆಯಿಂದಾಗಿ ಅಪಾರ ಬೆಳೆ ಹಾನಿ *  ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಿದ ಪಾಟೀಲ

ಹಿರೇಕೆರೂರ(ಆ.04): ತಾಲೂಕಿನ ಚಿಕ್ಕೇರೂರ ಗ್ರಾಮಕ್ಕೆ ಶಾಸಕ ಬಿ.ಸಿ. ಪಾಟೀಲ ಭೇಟಿ ನೀಡಿ, ಮಳೆಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ರೈತರ ಜಮೀನು ಹಾಗೂ ಮನೆಗಳನ್ನು ವೀಕ್ಷಣೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಬಿ.ಸಿ. ಪಾಟೀಲ, ಮಳೆಯಿಂದಾಗಿ ಅಪಾರ ಬೆಳೆ ಹಾನಿಯಾಗಿದ್ದು, ರೈತರಿಗೆ ನಷ್ಟವಾಗಿದೆ. ಅಧಿಕಾರಿಗಳು ಸಮರ್ಪಕ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

ಚಿಕ್ಕೇರೂರ ಗ್ರಾಮದ ಹೊರವಲಯದ ಬೈಪಾಸ್‌ ರಸ್ತೆಯಲ್ಲಿನ ಮೇಲ್ಸೆತುವೆ ಕುಸಿದಿದೆ. ಈ ರಸ್ತೆಯೂ ಪೂರ್ಣಗೊಂಡಿಲ್ಲ ಮತ್ತು ಚಿಕ್ಕೇರೂರ ಗ್ರಾಮ ದೊಡ್ಡದಾಗಿದ್ದು, ಇಲ್ಲಿಂದ ಮೂರು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು ಈ ರಸ್ತೆ ಮೂಲಕ ಹಾಯ್ದು ಹೋಗಬೇಕು ಈ ರಸ್ತೆಯನ್ನು ಪೂರ್ಣಗೊಳಿಸಿಲ್ಲ ಕೂಡಲೇ ಅಧಿಕಾರಿಗಳು ಭೇಟಿ ನೀಡಿ ಸರಿಪಡಿಸಬೇಕು ಜನೆತೆಗೆ ಆಗುವ ತೊಂದರೆಗಳನ್ನು ತಪ್ಪಿಸಬೇಕು ಎಂದು ದೂರವಾಣಿ ಮೂಲಕ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಡಿ.ಸಿ. ಪಾಟೀಲ, ರವಿಶಂಕರ ಬಾಳಿಕಾಯಿ, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ರೈತ ಸಂಘಟನೆ ಮತ್ತು ಕರವೇ ಕಾರ‍್ಯಕರ್ತರಿದ್ದರು.
 

PREV
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!