ಕೊರೋನಾ ಕಾಟ: ಲಾಕ್‌ಡೌನ್‌ನಿಂದ ಪ್ರಯೋಜನವಿಲ್ಲ ಎಂದ ಬಿಜೆಪಿ ಸಂಸದ

Published : Apr 18, 2021, 03:07 PM IST
ಕೊರೋನಾ ಕಾಟ: ಲಾಕ್‌ಡೌನ್‌ನಿಂದ ಪ್ರಯೋಜನವಿಲ್ಲ ಎಂದ ಬಿಜೆಪಿ ಸಂಸದ

ಸಾರಾಂಶ

ಲಾಕ್‌ಡೌನ್‌ನಿಂದ ಬಡವರಿಗೆ ತುಂಬಾ ತೊಂದರೆ| ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಅಲ್ಲಿ ಯಾವುದೇ ಪ್ರಯೋಜನವಾಗಿಲ್ಲ| ಲಾಕ್‌ಡೌನ್‌ ಬದಲಿಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸರ್ಕಾರ ಚಿಂತನೆ ನಡೆಸುವುದು ಹೆಚ್ಚು ಸೂಕ್ತ: ಜಿಗಜಿಣಗಿ| 

ವಿಜಯಪುರ(ಏ.18): ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ಗಿಂತ ಪರ್ಯಾಯ ಮಾರ್ಗ ಕಂಡುಕೊಳ್ಳುವುದೇ ಹೆಚ್ಚು ಉತ್ತಮ. ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಶನಿವಾರ ವಿಜಯಪುರ ನಗರದ ಹೊರ ವಲಯದ ಬುರಣಾಪುರ ಬಳಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಬಡವರಿಗೆ ತುಂಬಾ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. 

ರಾಜಧಾನಿಯಲ್ಲಿ ಕೊರೋನಾರ್ಭಟ: ಮತ್ತೆ ಬೆಂಗ್ಳೂರು ತೊರೆಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಅಲ್ಲಿ ಯಾವುದೇ ಪ್ರಯೋಜನವಾಗಿಲ್ಲ. ಲಾಕ್‌ಡೌನ್‌ ಬದಲಿಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸರ್ಕಾರ ಚಿಂತನೆ ನಡೆಸುವುದು ಹೆಚ್ಚು ಸೂಕ್ತವಾಗುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
 

PREV
click me!

Recommended Stories

ಕೊಡಗಿನಲ್ಲಿ ಮೊಹಮ್ಮದ್ ನಲಪಾಡ್ ಎರಡನೇ ಮದುವೆ; ಕಾಂಗ್ರೆಸ್ ನಾಯಕನ ಪುತ್ರಿ ಜೊತೆ ಅದ್ದೂರಿ ನಿಕಾಹ್‌, ದಿನಾಂಕ, ಸ್ಥಳ ಹಾಗೂ ಗಣ್ಯರ ಪಟ್ಟಿ ಇಲ್ಲಿದೆ!
Siddaramaiah: ವಿಧಾನಸಭೆ ಕಲಾಪಕ್ಕೆ ಬಂದು ಕೊನೆ ಸಾಲಲ್ಲಿ ಕುಳಿತ ಮಾಜಿ ಸಿಎಂ; ಸಿದ್ದರಾಮಯ್ಯರ ಪಕ್ಕ ಬಂದು ಕುಳಿತ ವಿಜಯೇಂದ್ರ