ಯಾರಿಗೇ ಸಚಿವ ಸ್ಥಾನ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ: ಉದಾಸಿ

Kannadaprabha News   | Asianet News
Published : Jul 01, 2021, 01:14 PM IST
ಯಾರಿಗೇ ಸಚಿವ ಸ್ಥಾನ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ: ಉದಾಸಿ

ಸಾರಾಂಶ

* ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದು ಅದು ಪ್ರಧಾನ ಮಂತ್ರಿಗಳ ವಿವೇಚನಾಧಿಕಾರ * ನಮ್ಮ ತಂದೆ ತೀರಿಕೊಂಡು ಇಪ್ಪತ್ತು ದಿನ ಆಗಿದೆ. ನಾನು ಚುನಾವಣೆ ಬಗ್ಗೆ ಆಲೋಚನೆ ಮಾಡಿಲ್ಲ * ನನ್ನ ಪಾಡಿಗೆ ನಾನು ಸಂಸದನಾಗಿ ಕೆಲಸ ಮಾಡ್ತಿದ್ದೇನೆ: ಉದಾಸಿ  

ಹಾವೇರಿ(ಜು.01): ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಯಾರಿಗೇ ಸಚಿವ ಸ್ಥಾನ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದು ಅದು ಪ್ರಧಾನ ಮಂತ್ರಿಗಳ ವಿವೇಚನಾಧಿಕಾರ. ಯಾರಿಗೇ ಸಚಿವ ಸ್ಥಾನ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಶಿವಕುಮಾರ ಉದಾಸಿ ಕೈ ಮುಗಿದರು.

ಬೆಳೆವಿಮೆ ಕಂತು ಕಟ್ಟಿ ಯೊಜನೆಯಲ್ಲಿ ಪಾಲ್ಗೊಳ್ಳುವಂತೆ ಉದಾಸಿ ಮನವಿ

ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉದಾಸಿ, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ತಂದೆ ತೀರಿಕೊಂಡು ಇಪ್ಪತ್ತು ದಿನ ಆಗಿದೆ. ನಾನು ಚುನಾವಣೆ ಬಗ್ಗೆ ಆಲೋಚನೆ ಮಾಡಿಲ್ಲ. ನನ್ನ ಪಾಡಿಗೆ ನಾನು ಸಂಸದನಾಗಿ ಕೆಲಸ ಮಾಡ್ತಿದ್ದೇನೆ ಎಂದರು.
 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ