ಬಿಬಿಎಂಪಿ ಚುಕ್ಕಾಣಿ ಹಿಡಿದ ಬಿಜೆಪಿ: ಗೌತಮ್ ಮೇಯರ್, ರಾಮ್ ಮೋಹನ್ ರಾಜು ಉಪಮೇಯರ್!

Published : Oct 01, 2019, 01:46 PM ISTUpdated : Oct 01, 2019, 06:25 PM IST
ಬಿಬಿಎಂಪಿ ಚುಕ್ಕಾಣಿ ಹಿಡಿದ ಬಿಜೆಪಿ: ಗೌತಮ್ ಮೇಯರ್, ರಾಮ್ ಮೋಹನ್ ರಾಜು ಉಪಮೇಯರ್!

ಸಾರಾಂಶ

ನಾಲ್ಕು ವರ್ಷಗಳ ಬಳಿಕ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ| ಬೃಹತ್ ಬೆಂಗಳೂರು ಮಹಾನಗರ ಪಾಲಿಗೆ ಚುನಾವಣೆಯಲ್ಲೂ ಬಿಜೆಪಿಗೆ ಜಯ| ಕೊನೆ ಗಳಿಹಗೆಯಲ್ಲಿ ಗೊಂದಲ ನಿವಾರಣೆ, ಆಕಾಂಕ್ಷಿಗಳ ಮನವೊಲಿಸಲು ಕಮಲ ಪಾಳಯ ಯಶಸ್ವಿ| ಬಿಜೆಪಿ ಅಭ್ಯರ್ಥಿ ಗೌತಮ್ ಮೇಯರ್ ಬೆಂಗಳೂರಿನ ನೂತನ ಮೇಯರ್, ರಾಮ್ ಮೋಹನ್ ರಾಜು ಉಪಮೇಯರ್| 

ಬೆಂಗಳೂರು[ಅ.01]: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಮೂಡಿಸಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಗೆದ್ದು ಬೀಗಿದೆ. ಬೆಂಗಳೂರಿನ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿದ್ದು, ಉಪ ಮೇಯರ್ ಆಗಿ ರಾಮ್ ಮೋಹನ್ ರಾಜು ಆಯ್ಕೆತಯಾಗಿದ್ದಾರೆ. 

"

ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಗದ್ದುಗೆ ಏರಲು ಬಿಜೆಪಿ ಯಶಸ್ವಿಯಾಗಿದ್ದು, ಕಾಂಗ್ರೆಸ್- ಜೆಡಿಎಸ್ ದೋಸ್ತಿಗಳಿಗೆ ತೀವ್ರ ಮುಖಭಂಗವಾಗಿದೆ. RSS ಹಿನ್ನೆಲೆಯ, ಜೈನ ಸಮುದಾಯದ ಗೌತಮ್‌ ಕುಮಾರ್‌ ಬೆಂಗಳೂರಿನ 53ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬೊಮ್ಮನಹಳ್ಳಿ ವಾರ್ಡ್ ನ ಕಾರ್ಪೋರೇಟರ್ ರಾಮ್ ಮೋಹನ್ ರಾಜು ಉಪ ಮೇಯರ್ ಆಗುವಲ್ಲಿ ಯಶಸ್ವಿಯಾಗಿದ್ದಾರೆ.

"

ಯಾರು ಗೌತಮ್ ಕುಮಾರ್?

ಎರಡು ಬಾರಿ ಬಿಜೆಪಿಯಿಂದ ಜೋಗುಪಾಳ್ಯ ವಾರ್ಡ್ ಕಾರ್ಪೊರೇಟರ್ ಆಗಿ ಆಯ್ಕೆಯಾದ ಗೌತಮ್ ಕುಮಾರ್, RSSನಲ್ಲಿ ಗುರುತಿಸಿಕೊಂಡಿದ್ದಾರೆ. ಬಿಕಾಂ ಪದವೀಧರರಾಗಿರುವ ಗೌತಮ್ ಕುಮಾರ್, ಎಂದಿಗೂ ಪಕ್ಷ ಮತ್ತು ಸಂಘದ ಮಾತನ್ನು ಯಾವತ್ತೂ ಮೀರಿದವರಲ್ಲ.

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!