ಶಿರಸಿ ಮಾರಿಕಾಂಬ ಆಡಳಿತ ಮಂಡಳಿ ಅಧ್ಯಕ್ಷರ ಮನೆ ಮುಂದೆ ಇದೆಂಥಾ ಕೃತ್ಯ !

Kannadaprabha News   | Asianet News
Published : Jan 03, 2020, 10:51 AM IST
ಶಿರಸಿ ಮಾರಿಕಾಂಬ ಆಡಳಿತ ಮಂಡಳಿ ಅಧ್ಯಕ್ಷರ ಮನೆ ಮುಂದೆ ಇದೆಂಥಾ ಕೃತ್ಯ !

ಸಾರಾಂಶ

ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು ಇದರ ಬೆನ್ನಲ್ಲೇ ಆಡಳಿತ ಮಂಡಳಿ ಅಧ್ಯಕ್ಷರ ಮನೆ ಮುಂದೆ ಇಂತಹ ಕೃತ್ಯ ಎಸಗಲಾಗಿದೆ. 

ಕಾರವಾರ [ಜ.03]: ಶಿರಸಿ ಮಾರಿಕಾಂಬ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮನೆ ಮುಂದೆ ಮಾಟ ಮಂತ್ರ ಮಾಡಲಾಗಿದೆ. 

ಶಿರಸಿಯಲ್ಲಿರುವ ಪ್ರಸಿದ್ಧ ಮಾರಿಕಾಂಬ ದೇವಾಲಯದ ಜಾತ್ರೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ ನಾಯ್ಕ್ ಅವರ ಮನೆ ಮುಂದೆ ಮಾಟ ಮಂತ್ರ ಮಾಡಲಾಗಿದೆ. 

ಮನೆಯ ಮುಂದೆ ಕುಂಬಳಕಾಯಿ, ಗಿಂಬೆ, ಲಿಂಬು ಹಾಗೂ ಕಪ್ಪು ದಾರಗಳನ್ನು ಮಂತ್ರಿಸಿ ಮನೆ ಎದುರು ಇರಿಸಲಾಗಿದೆ. ಅಲ್ಲದೇ ಕುಂಬಳಕಾಯಿಯಲ್ಲಿ ಕುಂಕುಮವನ್ನು ಹಾಕಿ ಇರಿಸಿದ್ದಾರೆ. 

ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಿಮಿಸಿದ ಪೊಲೀಸರು ಪರಿಶೀಲನೆ ನಡೆಸಿ ನಡೆಸಿದ್ದಾರೆ. ಅಲ್ಲದೇ ಕೃತ್ಯ ಎಸಗಿದವರ ಪತ್ತೆ ಕಾರ್ಯ ನಡೆಸಿದ್ದಾರೆ.

ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಗೆ ಡೇಟ್ ಫಿಕ್ಸ್...

ಮೂರು ವರ್ಷಗಳಿಗೆ ಒಮ್ಮೆ ಶಿರಸಿಯಲ್ಲಿ ಮಾರಿಕಾಂಬ ದೇವಿಯ ಅದ್ಧೂರಿ ಜಾತ್ರೆ ನಡೆಯಲಿದ್ದು. ಈ ಬಾರಿಯೂ ಇಲ್ಲಿ ಜಾತ್ರೆ ಜರುಗಲಿದೆ. ಈಗಾಗಲೇ ಜಾತ್ರೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 3 ರಿಂದ 11ರವರೆಗೆ ಇಲ್ಲಿ ಜಾತ್ರೆ ನಡೆಯಲು ದಿನಾಂಕ ಫಿಕ್ಸ್ ಮಾಡಲಾಗಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. 

PREV
click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!