ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಒಂದು ಮಹತ್ವದ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಇಲ್ಲಂದ್ರೆ ದಂಡ ಫಿಕ್ಸ್
ಬೆಂಗಳೂರು, (ಮಾ.05): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಗಳಲ್ಲಿ ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ.
ಪರಿಷ್ಕೃತ ಆದೇಶದ ಪ್ರಕಾರ ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್ಗೆ ಇನ್ನು ಮುಂದೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ.
ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಭಾರತದವರಿಂದ ಅಮೆರಿಕ ಕಂಟ್ರೋಲ್, ಶೂನ್ಯ ಸಂಪಾದಿಸಿದ ವಿರಾಟ್: ಮಾ.5ರ ಟಾಪ್ 10 ಸುದ್ದಿ!
ಬಸ್ ಹತ್ತುವ ಪ್ರಯಾಣಿಕರು ಟಿಕೆಟ್ ಕೇಳಿ ಪಡೆಯಬೇಕು. ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಪತ್ತೆಯಾದರೆ ಮೊದಲಿನಂತೆ ಕಂಡಕ್ಟರ್ ವಿರುದ್ಧ ಕರ್ತವ್ಯಲೋಪ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುವುದಿಲ್ಲ. ಕಂಡಕ್ಟರ್ಗೆ ದಂಡವನ್ನೂ ವಿಧಿಸುವುದಿಲ್ಲ. ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆಯಾಗಿರುತ್ತದೆ.
ಎನ್ಐಎನ್ಸಿ ನಿಯಮ ರದ್ದು ಮಾಡಿರುವುದರಿಂದ ಕಂಡಕ್ಟರ್ ಇಂಥ ಕಂಟಕಗಳಿಂದ ತಪ್ಪಿಸಿಕೊಂಡಂತೆ ಆಗಿದೆ. ಈ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾಗ ಎನ್ಐಎಸಿ ರದ್ದತಿಯ ಬೇಡಿಕೆಯನ್ನೂ ಮುಂದಿಟ್ಟಿದ್ದರು. ಇದೀಗ ನೌಕರರ ಬೇಡಿಕೆಗೆ ಬಿಎಂಟಿಸಿ ಒಪ್ಪಿಕೊಂಡಿದೆ.
ಕೆಲ ಪ್ರಯಾಣಿಕರು ಟಿಕೆಟ್ ಖರೀದಿಸದೆ ಸುಮ್ಮನೆ ಕುಳಿತುಬಿಡುತ್ತಿದ್ದರು. ತಪಾಸಣೆ ವೇಳೆ ಸಿಕ್ಕಿಬಿದ್ದಾಗ, 'ಕಂಡಕ್ಟರ್ ಈ ಕಡೆಗೆ ಬರಲೇ ಇಲ್ಲ. ಹಣಕೊಟ್ಟರೂ ಟಿಕೆಟ್ ಕೊಟ್ಟಿಲ್ಲ' ಎಂದೆಲ್ಲಾ ದೂರುತ್ತಿದ್ದರು. ಇಂಥ ಸಂದರ್ಭಗಳಲ್ಲಿ ತಪಾಸಣೆಗೆ ಬಂದ ಅಧಿಕಾರಿಗಳು ಪ್ರಯಾಣಿಕರಿಗೆ ದಂಡ ವಿಧಿಸಿ, ಕಂಡಕ್ಟರ್ಗಳನ್ನು ಹೊಣೆ ಮಾಡಿ ವಿಚಾರಣೆಗೆ ಸೂಚಿಸುತ್ತಿದ್ದರು.