ಮತದಾನವನ್ನು ಹಬ್ಬವಾಗಿ ಆಚರಿಸಿ

Published : May 10, 2023, 05:46 AM IST
 ಮತದಾನವನ್ನು ಹಬ್ಬವಾಗಿ ಆಚರಿಸಿ

ಸಾರಾಂಶ

ಎಲ್ಲರೂ ಮತದಾನದ ದಿನವನ್ನು ಪ್ರಜಾಪ್ರಭುತ್ವದ ಹಬ್ಬದ ದಿನವನ್ನಾಗಿ ಆಚರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕೋರಿದ್ದಾರೆ.

 ಮೈಸೂರು :  ಎಲ್ಲರೂ ಮತದಾನದ ದಿನವನ್ನು ಪ್ರಜಾಪ್ರಭುತ್ವದ ಹಬ್ಬದ ದಿನವನ್ನಾಗಿ ಆಚರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕೋರಿದ್ದಾರೆ.

ಪ್ರತಿಯೊಬ್ಬರ ಮತವೂ ಅಮೂಲ್ಯವಾದದ್ದಾಗಿದ್ದು ಯಾವುದೇ ರೀತಿಯ ಆಮಿಷ/ಒತ್ತಡಗಳಿಗೆ ಒಳಗಾಗದೆ ನಿರ್ಭೀತರಾಗಿ ತಮ್ಮ ಹೆಸರು ನೋಂದಾವಣೆಯಾಗಿರುವ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ನಿಗದಿತ ಮತದಾನದ ಸಮಯದಲ್ಲಿ ಹಾಜರಾಗಿ ತಪ್ಪದೇ ತಮ್ಮ ಪವಿತ್ರವಾದ ಮತವನ್ನು ಚಲಾಯಿಸುವಂತೆ ಅವರು ಮನವವಿ ಮಾಡಿದ್ದಾರೆ.

ಚುನಾವಣೆ ನಿಮಿತ್ತ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ:

ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್‌ ಇಲಾಖೆಗೆ ನಿಯೋಜಿಸಲಾಗಿದೆ. ಆದ್ದರಿಂದ ಸಾರ್ವಜನಿಕ ನಿಗಮದ ವಾಹನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಲು ಮತ್ತು ಅದಕ್ಕನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಕೋರಿದ್ದಾರೆ.

ಈ ಭಾರಿ ನಾನೇ ಸಿಎಂ HDK  ವಿಶ್ವಾಸ

ಪೀಣ್ಯ ದಾಸರಹಳ್ಳಿ (ಮೇ.07): ಪ್ರಸಕ್ತ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವುದು ಜೆಡಿಎಸ್‌ ಗುರಿ, ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸಮೀಕ್ಷೆಗಳನ್ನು ಭಿತ್ತರಿಸುತ್ತಿದ್ದಾರೆ. .20 ಕೋಟಿ ನಾವು ಕೊಟ್ಟರೆ ಜೆಡಿಎಸ್‌ 128 ಸೀಟು ಬರುತ್ತೆ ಅಂತಾ ಹೇಳ್ತಾರೆ, ಅದನ್ನೆಲ್ಲ ನಂಬಬೇಡಿ ಎಂದು ಮತದಾನ ಪೂರ್ವ ಸಮೀಕ್ಷೆಗಳ ಬಗ್ಗೆ ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿಯ ಪೀಣ್ಯ 2ನೇ ಹಂತ ರಾಜಗೋಪಾಲ ನಗರ, ಸುಂಕದಕಟ್ಟೆಮೂಲಕ ರೋಡ್‌ ಶೋ ಹಾಗೂ ಬೈಕ್‌ ರ್ಯಾಲಿ ಮೂಲಕ ಮಾತಾಯಾಚನೆ ಮಾಡಿದರು. ಬಳಿಕ ಮಾತನಾಡಿದ ಕುಮಾರಸ್ವಾಮಿ, ಈ ಬಾರಿ ಕಾಂಗ್ರೆಸ್‌, ಬಿಜೆಪಿ ಏನೇ ಕುತಂತ್ರ ಮಾಡಿದರೂ ಕುಮಾರಸ್ವಾಮಿ ಸಿಎಂ ಆಗೋದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಎರಡು ದಿನದ ಹಿಂದೆ ಕಾಂಗ್ರೆಸ್‌ 116 ಸೀಟು ಗೆಲ್ಲುತ್ತೆ ಅಂತಾ ಹೇಳಿದ್ದರು, ನಿನ್ನೆ ಆಗಲೇ ಬಿಜೆಪಿ 116 ಸೀಟು ಗೆಲ್ಲುತ್ತೆ, ಜೆಡಿಎಸ್‌ 22ರಿಂದ 28 ಅಂತಾ ಭಿತ್ತರಿಸುತ್ತಿದ್ದಾರೆ. ನಾವು 20 ಕೋಟಿ ಕೊಟ್ಟರೆ ಜೆಡಿಎಸ್‌ 128 ಸೀಟು ಗೆಲ್ಲುತ್ತೆ ಅಂತಾ ಹೇಳ್ತಾರೆ. ಇದನ್ನೆಲ್ಲ ನಂಬಲು ಹೋಗಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಉತ್ತರ ಕರ್ನಾಟಕದಲ್ಲೇ ಈ ಬಾರಿ ಜೆಡಿಎಸ್‌ 30ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ. ಇನ್ನು ಜೆಡಿಎಸ್‌ ಭದ್ರಕೋಟೆಗಳಾದ ಹಾಸನ, ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭರ್ಜರಿ ಜಯ ಸಾಧಿಸುತ್ತೇವೆ. ನನಗೆ ಆರೋಗ್ಯ ತೊಂದರೆ ಇದ್ದರೂ ರಾಜ್ಯದ ಉದ್ದಗಲಕ್ಕೂ ಸುತ್ತಿದ್ದೇನೆ.

ಬೆಂಗ್ಳೂರಲ್ಲಿ 26 ಕಿಮೀ ರೋಡ್‌ ಶೋ: ರಾಜ್ಯದಲ್ಲೇ ಮೊದಲು ಮೋದಿ ದಾಖಲೆ ಶೋ!

ರಾಜ್ಯದ ಜನತೆಗೆ ನೆಮ್ಮದಿಯ ಜೀವನ ತರಬೇಕು ಎಂಬುದು ನನ್ನ ಜೀವನದ ಕೊನೆಯ ಆಸೆ. ನಮ್ಮ ಜನ ದುಡ್ಡಿಗೆ ಮರುಳಾಗುವುದಿಲ್ಲ, ನಾಡು, ನುಡಿ ರಕ್ಷಣೆ ನಿಟ್ಟಿನಲ್ಲಿ ನಾವು ಹಮ್ಮಿಕೊಂಡಿರುವ ಪಂಚರತ್ನ ಯೋಜನೆಗಳನ್ನು ಬೆಂಬಲಿಸಿ ರಾಜ್ಯದ ಜನತೆ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯವರು ಕಾಂಗ್ರೆಸ್‌ ವಿರುದ್ಧ ಶೇ.85 ಭ್ರಷ್ಟಾಚಾರ, ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ ಶೇ.40 ಭ್ರಷ್ಟಾಚಾರ ಸರ್ಕಾರ ಎಂದು ಆರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ, ಜೆಡಿಎಸ್‌ ವಿರುದ್ಧ ಆ ರೀತಿಯ ಆರೋಪ ಹೊರಿಸಲು ಸಾಧ್ಯವೇ ಇಲ್ಲ. ಯಾಕಂದರೆ ನಾವು ಭ್ರಷ್ಟಾಚಾರ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಗ್ಯಾರಂಟಿ ಈಡೇರಿಸಿದ್ದೇವೆ: ಮೋದಿ ವಿರುದ್ಧ ಸೋನಿಯಾ ಗಾಂಧಿ ಕಿಡಿ

ನಂತರ ಕುಮಾರಸ್ವಾಮಿ ಅವರು ದಾಸರಹಳ್ಳಿ ಕ್ಷೇತ್ರದ ಹೆಗ್ಗನಹಳ್ಳಿ, ಪೀಣ್ಯ, ಸುಂಕದಕಟ್ಟೆಇತರೆ ಪ್ರದೇಶಗಳಲ್ಲಿ ರಾರ‍ಯಲಿ ನಡೆಸುವ ಮೂಲಕ ಮಂಜುನಾಥ್‌ ಪರ ಮತಯಾಚನೆ ನಡೆಸಿದರು. ಸಾವಿರಾರು ಕಾರ್ಯಕರ್ತರು, ಸ್ಥಳೀಯ ನಾಗರಿಕರು ಭಾಗವಹಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ