ಸಾಹುಕಾರ್‌ನ ಕಾಮಕಾಂಡ: 'ಜಾರಕಿಹೊಳಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿ'

Kannadaprabha News   | Asianet News
Published : Mar 05, 2021, 01:56 PM IST
ಸಾಹುಕಾರ್‌ನ ಕಾಮಕಾಂಡ: 'ಜಾರಕಿಹೊಳಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿ'

ಸಾರಾಂಶ

ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಬಳಸಿಕೊಳ್ಳುತ್ತಿರುವುದು ಶೋಚನೀಯ| ರಮೇಶ ಜಾರಕಿಹೊಳಿ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ| ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕು: ರಾಷ್ಟ್ರ ಸಮಿತಿ ಪಕ್ಷ| 

ಹೊಸಪೇಟೆ(ಮಾ.05):  ಮಾಜಿ ಮಂತ್ರಿ ರಮೇಶ ಜಾರಕಿಹೊಳಿ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಪ್ರಕಟಿಸಿರುವ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ ದೊಡ್ಡಮನಿ, ಪ್ರ. ಕಾರ್ಯದರ್ಶಿ ಪ.ಯ. ಗಣೇಶ, ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಬಳಸಿಕೊಳ್ಳುತ್ತಿರುವುದು ಶೋಚನೀಯ ಎಂದು ಹೇಳಿದ್ದಾರೆ. 

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌, ಲಕ್ಷಾಂತರ ಮೌಲ್ಯದ ಕಟ್ಟಿಗೆ, ಜೀನ್ಸ್‌ ಭಸ್ಮ

ಪ್ರಸ್ತುತ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ವಾಗತಿಸುತ್ತದೆ ಹಾಗೂ ಅವರು ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
 

PREV
click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ