ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಡಾ.ಅನಿಲ್ ಕುಮಾರ್ ನಿಧನ

Published : Apr 16, 2020, 06:11 PM ISTUpdated : Apr 16, 2020, 06:17 PM IST
ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಡಾ.ಅನಿಲ್ ಕುಮಾರ್ ನಿಧನ

ಸಾರಾಂಶ

ಕೊರೋನಾ ಹೋರಾಟದಲ್ಲಿ ಹೆಚ್ಚಿನ ಶ್ರಮ ವಹಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ.ಅನಿಲ್ ಕುಮಾರ್ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ, (ಏ.16): ಜಿಲ್ಲಾ ಶಸ್ಕಚಿಕಿತ್ಸಕರಾಗಿದ್ದ ಡಾ. ಅನಿಲ್ ಕುಮಾರ್  (52) ಅವರು ಇಂದು (ಗುರುವಾರ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಕಳೆದ ಮಾ.8ರಂದು ಕೊರೋನಾ ತಡೆ ಕರ್ತವ್ಯದಲ್ಲಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು.ಇದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆಂಜಿಯೋಪ್ಲಾಸ್ಟಿ  ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರು ಕನಕಪುರ ತಾಲೂಕಿನ ಹಾರೋಹಳ್ಳಿ ಗ್ರಾಮಕ್ಕೆ ಸೇರಿದವರಾಗಿದ್ದು, ಇವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. 

ಕೊರೋನಾ ಹೋರಾಟದಲ್ಲಿ ಹೆಚ್ಚಿನ ಶ್ರಮ
ಕಳೆದ 8 ತಿಂಗಳ ಹಿಂದೆ ಜಿಲ್ಲಾ ಶಸ್ಕ ಚಿಕಿತ್ಸಕರಾಗಿ ಅಧಿಕಾರ ವಹಿಸಿಕೊಂಡಿದ್ದ ಡಾ. ಅನಿಲ್ ಕುಮಾರ್ ಅವರು ಕೊರೋನಾ ಸೋಂಕು ತಡೆ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. 

ಹಳೇ ಜಿಲ್ಲಾಸ್ಪತ್ರೆಯನ್ನು ಕೋವಿಡ್ 19 ಆಸ್ಪತ್ರೆಯನ್ನಾಗಿ ಬದಲಿಸಿದ ಶ್ರಮದ ಹಿಂದೆ ಅನಿಲ್ ಕುಮಾರ್ ಅವರದ್ದು ಇದೆ.  ಅಲ್ಲದೆ ನಿರಂತರವಾಗಿ ಕೋವಿಡ್ 19  ರೋಗಿಗಳ ಚಿಕಿತ್ಸೆ ಸೇರಿದಂತೆ ಇತರೆ ಕ್ರಮಗಳಲ್ಲಿ ಅನಿಲ್ ಕುಮಾರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದರು.

ಇವರ ನಿಧನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸಂತಾಪ ಸೂಚಿಸಿದ್ದಾರೆ.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ