ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!

ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!

Published : Jun 08, 2026, 06:04 PM IST
ಚಿಕ್ಕಬಳ್ಳಾಪುರದಲ್ಲಿ ಗಂಡನ ಮನೆಯವರ ಕಿರುಕುಳದಿಂದ ನವವಿವಾಹಿತೆ ಪುಷ್ಪಾ ಕೊಲೆಯಾಗಿದ್ದಾಳೆ. ಕಳ್ಳತನದ ನಾಟಕವಾಡಿದ ಅತ್ತೆ, ನಾದಿನಿ ಸೇರಿದಂತೆ ಆರೋಪಿಗಳನ್ನು ಪೊಲೀಸರು ತನಿಖೆ ನಡೆಸಿ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ (ಜೂ.8): ಗಂಡನ ಮನೆಯವರ ಕಿರುಕುಳಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮದುವೆಯಾಗಿ ಮೂರೇ ತಿಂಗಳಿಗೆ ಅತ್ತೆ ಮತ್ತು ನಾದಿನಿ ನೀಡುತ್ತಿದ್ದ ಹಿಂಸೆ ತಾಳಲಾರದೆ ಪುಷ್ಪಾ ಎಂಬಾಕೆ ತವರು ಮನೆ ಸೇರಿದ್ದಳು. ಗಂಡ ಬೇರೆ ಮನೆ ಮಾಡುವುದಾಗಿ ಭರವಸೆ ನೀಡಿ ಆಕೆಯನ್ನು ಕರೆತಂದು, ಹೊಸ ಮನೆಗೂ ಬದಲಾಗಿದ್ದ. ಆದರೆ, ಮಗ ದೂರಾಗಲು ಸೊಸೆಯೇ ಕಾರಣ ಎಂದು ರೊಚ್ಚಿಗೆದ್ದ ಅತ್ತೆ, ನಾದಿನಿ ಮತ್ತು ಅಜ್ಜಿ ಸೇರಿ ಪುಷ್ಪಾಳ ಕೊಲೆಗೆ ಸ್ಕೆಚ್ ಹಾಕಿದ್ದರು.

ಭೀಮಾತೀರದಲ್ಲಿ ರಕ್ತದೋಕುಳಿ: ವಿಜಯಪುರದಲ್ಲಿ ಆಸ್ತಿ ವಿವಾದಕ್ಕೆ 6 ಜನರ ಭೀಕರ ಹ*ತ್ಯೆ!

ಯಾರಿಗೂ ಅನುಮಾನ ಬಾರದಂತೆ ಕುಟುಂಬಸ್ಥರು ಕೇರಳದ ದೇವಸ್ಥಾನಕ್ಕೆ ತೆರಳಿದ್ದರು. ಅತ್ತೆಯ ಸ್ಕೆಚ್ ಪ್ರಕಾರ, ಸಂಬಂಧಿಕರು ಸೇರಿ ಮನೆಯಲ್ಲಿದ್ದ ಪುಷ್ಪಾಳ ಕತ್ತು ಕೊಯ್ದು ಕೊಲೆ ಮಾಡಿದ್ದರು. ಬಳಿಕ ಇದೊಂದು ಕಳ್ಳತನಕ್ಕಾಗಿ ನಡೆದ ಹತ್ಯೆ (ರಾಬರಿ ಮರ್ಡರ್) ಎಂದು ಬಿಂಬಿಸಲು ನಾಟಕವಾಡಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ತೆರೆದ ಬಾಗಿಲು ಹಾಗೂ ಮೃತರ ಕತ್ತಿನ ಗಾಯಗಳು ಪ್ರಮುಖ ಕ್ಲೂ ನೀಡಿದ್ದವು. ಕಥೆ ಕಟ್ಟಿದ ಆರೋಪಿಗಳ ನಾಟಕವನ್ನು ಪತ್ತೆಹಚ್ಚಿದ ಪೊಲೀಸರು, ಅತ್ತೆ, ನಾದಿನಿ ಸೇರಿದಂತೆ ಪ್ರಮುಖ ಕಿರಾತಕರನ್ನು ಜೈಲಿಗಟ್ಟಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more