ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!

ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!

Published : Jun 08, 2026, 06:04 PM IST
ಚಿಕ್ಕಬಳ್ಳಾಪುರದಲ್ಲಿ ಗಂಡನ ಮನೆಯವರ ಕಿರುಕುಳದಿಂದ ನವವಿವಾಹಿತೆ ಪುಷ್ಪಾ ಕೊಲೆಯಾಗಿದ್ದಾಳೆ. ಕಳ್ಳತನದ ನಾಟಕವಾಡಿದ ಅತ್ತೆ, ನಾದಿನಿ ಸೇರಿದಂತೆ ಆರೋಪಿಗಳನ್ನು ಪೊಲೀಸರು ತನಿಖೆ ನಡೆಸಿ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ (ಜೂ.8): ಗಂಡನ ಮನೆಯವರ ಕಿರುಕುಳಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮದುವೆಯಾಗಿ ಮೂರೇ ತಿಂಗಳಿಗೆ ಅತ್ತೆ ಮತ್ತು ನಾದಿನಿ ನೀಡುತ್ತಿದ್ದ ಹಿಂಸೆ ತಾಳಲಾರದೆ ಪುಷ್ಪಾ ಎಂಬಾಕೆ ತವರು ಮನೆ ಸೇರಿದ್ದಳು. ಗಂಡ ಬೇರೆ ಮನೆ ಮಾಡುವುದಾಗಿ ಭರವಸೆ ನೀಡಿ ಆಕೆಯನ್ನು ಕರೆತಂದು, ಹೊಸ ಮನೆಗೂ ಬದಲಾಗಿದ್ದ. ಆದರೆ, ಮಗ ದೂರಾಗಲು ಸೊಸೆಯೇ ಕಾರಣ ಎಂದು ರೊಚ್ಚಿಗೆದ್ದ ಅತ್ತೆ, ನಾದಿನಿ ಮತ್ತು ಅಜ್ಜಿ ಸೇರಿ ಪುಷ್ಪಾಳ ಕೊಲೆಗೆ ಸ್ಕೆಚ್ ಹಾಕಿದ್ದರು.

ಭೀಮಾತೀರದಲ್ಲಿ ರಕ್ತದೋಕುಳಿ: ವಿಜಯಪುರದಲ್ಲಿ ಆಸ್ತಿ ವಿವಾದಕ್ಕೆ 6 ಜನರ ಭೀಕರ ಹ*ತ್ಯೆ!

ಯಾರಿಗೂ ಅನುಮಾನ ಬಾರದಂತೆ ಕುಟುಂಬಸ್ಥರು ಕೇರಳದ ದೇವಸ್ಥಾನಕ್ಕೆ ತೆರಳಿದ್ದರು. ಅತ್ತೆಯ ಸ್ಕೆಚ್ ಪ್ರಕಾರ, ಸಂಬಂಧಿಕರು ಸೇರಿ ಮನೆಯಲ್ಲಿದ್ದ ಪುಷ್ಪಾಳ ಕತ್ತು ಕೊಯ್ದು ಕೊಲೆ ಮಾಡಿದ್ದರು. ಬಳಿಕ ಇದೊಂದು ಕಳ್ಳತನಕ್ಕಾಗಿ ನಡೆದ ಹತ್ಯೆ (ರಾಬರಿ ಮರ್ಡರ್) ಎಂದು ಬಿಂಬಿಸಲು ನಾಟಕವಾಡಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ತೆರೆದ ಬಾಗಿಲು ಹಾಗೂ ಮೃತರ ಕತ್ತಿನ ಗಾಯಗಳು ಪ್ರಮುಖ ಕ್ಲೂ ನೀಡಿದ್ದವು. ಕಥೆ ಕಟ್ಟಿದ ಆರೋಪಿಗಳ ನಾಟಕವನ್ನು ಪತ್ತೆಹಚ್ಚಿದ ಪೊಲೀಸರು, ಅತ್ತೆ, ನಾದಿನಿ ಸೇರಿದಂತೆ ಪ್ರಮುಖ ಕಿರಾತಕರನ್ನು ಜೈಲಿಗಟ್ಟಿದ್ದಾರೆ.
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
Read more