Earthquake in Chikkaballapura : ಬೆಳ್ಳಂಬೆಳಗ್ಗೆ ಭೂಕಂಪನ : 3.0 ರಷ್ಟು ತೀವ್ರತೆ

By Suvarna NewsFirst Published Dec 22, 2021, 10:35 AM IST
Highlights
  • ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವ ಉಂಟಾಗಿದೆ
  • ಇಲ್ಲಿನ ಮಂಡಿಕಲ್ ಹೋಬಳಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವ ಉಂಟಾಗಿದೆ.  

 ಚಿಕ್ಕಬಳ್ಳಾಪುರ (ಡಿ.22): ಚಿಕ್ಕಬಳ್ಳಾಪುರದಲ್ಲಿ (Chikkaballapura ) ಬೆಳ್ಳಂಬೆಳಗ್ಗೆ ಭೂಕಂಪನದ (earthquakes) ಅನುಭವ ಉಂಟಾಗಿದೆ. ಇಲ್ಲಿನ ಮಂಡಿಕಲ್ ಹೋಬಳಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವ ಉಂಟಾಗಿದೆ.   ರಿಕ್ಟರ್ ಮಾಪಕದಲ್ಲಿ 3.0 ರಷ್ಟು ತೀವ್ರತೆ ದಾಖಲಾಗಿದೆ.  ಅಡ್ಡಗಲ್ ಗ್ರಾಮ ಪಂಚಾಯತ್ (Panchayat) ವ್ಯಾಪ್ತಿಯಲ್ಲಿ ಭೂಕಂಪನವಾಗಿದೆ. 

ಭೂಕಂಪ ಆಗಿರುವ ಗ್ರಾಮಗಳತ್ತ ಅಧಿಕಾರಿಗಳು ದೌಡಾಯಿಸಿದ್ದು  ಈ ಬಗ್ಗೆ ಜಿಲ್ಲಾಧಿಕಾರಿ (DC) ಆರ್ ಲತಾ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ಇಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಆದರೆ ಅದೆಲ್ಲಾ  ಕಲ್ಲು ಗಣಿಗಾರಿಕೆಯಿಂದ ಉಂಟಾದ ಶಬ್ದವೆನ್ನಲಾಗಿದ್ದು ಇದೀಗ ಮತ್ತೆ ಇಲ್ಲಿನ ಜನರಿಗೆ ಭೂಮಿ ನಡುಗಿದ ಅನುಭವ ಉಂಟಾಗಿದೆ.  

ಭೂ ಕಂಪನ ಅನುಭವ :   ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಚಿಲಕಲನೇರ್ಪು ಹೋಬಳಿ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತ  ನ. 11 ರಂದು ಸಂಭವಿಸಿರುವುದು ಭೂ ಕಂಪನ(Earthquake) ಅಲ್ಲ. ಅದು ಬರೀ ಏರ್‌ ಬ್ಲಾಸ್ಟ್‌ (air Blast) ಮಾತ್ರ. ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ( Mines and geological department) ಅಧಿಕಾರಿಗಳು ಸ್ಪಷ್ಟಪಡಿಸಿದ್ದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಮಿಟ್ಟಹಳ್ಳಿ ಗ್ರಾಮದಲ್ಲಿ ಸಂಭವಿಸಿರುವುದು ಭೂ ಕಂಪನ ಅಲ್ಲ. ಅದು ಏರ್‌ ಬ್ಲಾಸ್ಟ್‌ ಆಗಿರಬಹುದೆಂದು ಅಂದಾಜಿಸಿದ್ದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅಧ್ಯಯನ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳನ್ನು ಕೋರಿತ್ತು

ಇತ್ತೀಚೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆ (Heavy Rain) ಆಗಿದ್ದು ಮಳೆಯ ನೀರು ಭೂಮಿಯೊಳಗೆ ಇಂಗುವ ಸಂದರ್ಭದಲ್ಲಿ ಭೂಮಿ ಪದರಗಳ ಮಧ್ಯೆ ಸಾಕಷ್ಟು ಬಿರುಕು ಇದೆ. ಈಗ ಮಳೆಯ ನೀರು ಭೂಮಿಯೊಳಗೆ ಇಂಗುವ ಸಂದರ್ಭದಲ್ಲಿ ಒಳಗೆ ಈ ರೀತಿಯ ಏರ್‌ ಬ್ಲಾಸ್ಟ್‌ ಆಗುವ ಸಾಧ್ಯತೆಗಳು ಇರುತ್ತೇವೆಯೆಂದು ಹಿರಿಯ ಅಧಿಕಾರಿಯೊಬ್ಬರು ಕನ್ನಡ ಪ್ರಭಗೆ ತಿಳಿಸಿದರು. ಮಿಟ್ಟಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತ ವ್ಯಾಪಕ ಪ್ರಮಾಣದಲ್ಲಿ ರೈತರು ಕೊಳವೆ ಬಾವಿಗಳನ್ನು ಕೊರೆಸಿದ್ದಾರೆ. ಹೀಗಾಗಿ ಈ ರೀತಿಯ ಏರ್‌ ಬ್ಲಾಸ್ಟ್‌ ಆಗಿರುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಮಿಟ್ಟಹಳ್ಳಿಗೆ ಡೀಸಿ, ಎಸ್ಪಿ ಭೇಟಿ :  ಚಿಂತಾಮಣಿ ತಾಲೂಕು ಮಿಟ್ಟಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಜೋರಾದ ಶಬ್ದ ಕೇಳಿ ಬಂದು ಈ ಭಾಗದ ಜನರು ಆತಂಕದಲ್ಲಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಸ್ಥಳಕ್ಕೆ ಭೇಟಿ ಮಾಡಿ, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ಲತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವರದಿ ಪಡೆಯಲಾಗಿದ್ದು, ಸದರಿ ಪ್ರದೇಶದಲ್ಲಿ ಯಾವುದೇ ಭೂಕಂಪದ ವಾತಾವರಣ ಇರುವುದಿಲ್ಲವೆಂದು ವರದಿ ಬಂದಿದೆ. ಈ ಬಗ್ಗೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಚಿಂತಾಮಣಿ ತಹಸೀಲ್ದಾರ್‌ ಹನುಮಂತರಾಯಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಚಿಕ್ಕಬಳ್ಳಾಪುರ ದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪ 

ಮಂಡಿಕಲ್ ಹೋಬಳಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪನ

ರಿಕ್ಟರ್ ಮಾಪಕದಲ್ಲಿ 3.0 ರಷ್ಡು ತೀವ್ರತೆ ದಾಖಲು

ಅಡ್ಡಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭೂಕಂಪನ

ಭೂಕಂಪ ಆಗಿರೋ ಗ್ರಾಮಗಳತ್ತ ಅಧಿಕಾರಿಗಳ ದೌಡು

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ಮಾಹಿತಿ

ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ ಗ್ರಾಮಪಂಚಾಯತ್

click me!