ಬಂಜರು ಭೂಮಿಯಲ್ಲಿ ಹಿಮಾಚಲ ಸೇಬು ಬೆಳೆದು ಅಚ್ಚರಿ ಮೂಡಿಸಿದ ಚಿತ್ರದುರ್ಗದ ರೈತ

Published : Apr 15, 2022, 07:46 PM ISTUpdated : Apr 15, 2022, 07:48 PM IST
ಬಂಜರು ಭೂಮಿಯಲ್ಲಿ ಹಿಮಾಚಲ ಸೇಬು ಬೆಳೆದು ಅಚ್ಚರಿ ಮೂಡಿಸಿದ ಚಿತ್ರದುರ್ಗದ ರೈತ

ಸಾರಾಂಶ

* ಬಂಜರು ಭೂಮಿಯಲ್ಲಿ ಬಂಗಾರದಂಥ ಹಿಮಾಚಲದ ಸೇಬು ಬೆಳೆದ ರೈತ * ಗೊಡಬನಾಳ್ ರೈತನ ಈ ಯಶೋಗಾಥೆ * ಸೇಬಿನಿಂದ ಯಶಸ್ಸು ಕಂಡ ಇರ್ನೋರ್ವ ರೈತ

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿತ್ರದುರ್ಗ, (ಏ.15) : ಕೋಟೆ ನಾಡು ಚಿತ್ರದುರ್ಗ ಅಂದ್ರೆ ಎಲ್ಲರಿಗೂ ನೆನಪಾಗೋದೆ ಅದೊಂದು ಬರದನಾಡು ಅಂತ. ಕೃಷಿಗೆ ಅದೆಷ್ಟು ಬಂಡವಾಳ ಹಾಕಿದ್ರು ಲಾಭ ಸಿಗಲ್ಲ ಅನ್ನೋದು ಅಲ್ಲಿನ ಹಲವು ರೈತರ ಕೂಗು, ಆದ್ರೆ ಅಲ್ಲೋಬ್ಬ ರೈತ ಬಂಜರು ಭೂಮಿಯಲ್ಲಿ ಬಂಗಾರದಂಥ ಹಿಮಾಚಲದ ಸೇಬು ಬೆಳೆದು ಸೈ ಎನಿಸಿಕೊಂಡಿದ್ದಾನೆ. ಈ ಕುರಿತಾದ ಒಂದು ಸ್ಪೆಷಲ್‌ ರಿಪೋರ್ಟ್ ಇಲ್ಲಿದೆ......,,

ನೋಡಿ ಹೀಗೆ ಬಾಳೆ ತೋಟದ ಮಧ್ಯೆ ಬೆಳೆದು ನಿಂತಿರೋ ಸೇಬಿನ ಗಿಡಗಳು. ಗಿಡದಲ್ಲಿ ಕಣ್ಣು ಕುಕ್ಕುವಂತೆ ಕೆಂಪಗೆ ಮಿರಿ ಮಿರಿ ಮಿಂಚಿ ಬಾಯಲ್ಲಿ ನೀರು ತರಿಸುತ್ತಿರೋ ಸೇಬಿನ ಹಣ್ಣುಗಳು..! ಈ ಸೇಬಿನ ತೋಟ ನೋಡಿ, ಇದ್ಯಾವುದೋ ಹಿಮಾಚಲದ್ದೋ ಅಥವಾ ಕಾಶ್ಮಿರದ್ದೋ ಅನ್ಕೋಬೇಡಿ. ಯಾಕಂದ್ರೆ ಇದು ನಮ್ಮದೇ ರಾಜ್ಯದ ಕೋಟೆ ನಾಡು  ಚಿತ್ರದುರ್ಗ ತಾಲ್ಲೂಕಿನ ಗೊಡಬನಾಳ್ ಗ್ರಾಮದ ರೈತ ಜ್ಯೋತಿಪ್ರಕಾಶ್ ಜಮೀನಿನದ್ದು. ವಂಶಪಾರಂಪರ್ಯವಾಗಿ ನಮ್ಮ ಪೂರ್ವಜರು ಅಡಿಕೆ ಬೆಳೆಯನ್ನು ನಂಬಿಕೊಂಡು ಬೆಳೆಯುತ್ತಿದ್ದರು. ಆದ್ರೆ ಇತ್ತೀಚೆಗೆ ಪ್ರತಿಯೊಂದು ಭಾಗದಲ್ಲೂ ಅಡಿಕೆ ಬೆಳೆದಿರೋದ್ರಿಂದ ಮುಂದೆ ಅದಕ್ಕೆ ಭವಿಷ್ಯವಿಕ್ಕ ಎಂವ ಉದ್ದೇಶದಿಂದ ತಮ್ಮದೇ ಜಮೀನಿನಲ್ಲಿ ಸೇಬು ಕೃಷಿ ಮಾಡುವ ಮೂಲಕ ಜಿಲ್ಲೆಯ ರೈತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

Raita Ratna 2022 ಧಾರವಾಡ ಮಂಡಿಹಾಳದ ಸ್ವಾವಲಂಬಿ ರೈತ ಮಹಿಳೆ ಲಕ್ಷ್ಮವ್ವ ಹಡಪದ

ತಮ್ಮ 4 ಎಕರೆ ಬರಡು ಭೂಮಿಯಲ್ಲಿ ಬಾಳೆ ಮಧ್ಯೆ ಹಿಮಾಚಲ ಮೂಲದ ಪ್ರಸಿದ್ದ ಅರ್ಬನ್೯೯, ಡಾರ್ಸೆಟ್ ಗೋಲ್ಡನ್ ಹಾಗೂ ಅನ್ನಾ ತಳಿಗಳು ಮಾತ್ರ ಎಲ್ಲಾ ಪ್ರದೇಶಗಳಲ್ಲೂ ಬೆಳೆದು ನಿಂತಿವೆ.  ಹಳೆ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆದು ಕೈ ಸುಟ್ಟುಕೊಂಡಿದ್ದ ಈ ರೈತರು ಸದ್ದಿಲ್ಲದೆ ಹೊಸ ಪ್ರಯೋಗಕ್ಕೆ ಮುಂದಾದ ಪರಿಣಾಮ ಬರದನಾಡು ಚಿತ್ರದುರ್ಗದಲ್ಲೂ ಸೇಬನ್ನು ಬೆಳೆಯಬಹುದು ಎನ್ನುವ ಹೊಸ ಭರವಸೆ ಮೂಡಿಸಿದ್ದಾರೆ.

ಇನ್ನೂ ಗೊಡಬನಾಳ್ ರೈತನ ಈ ಯಶೋಗಾಥೆಯನ್ನು ಕಂಡಂತಹ ಅನೇಕ ರೈತರು ಉತ್ಪ್ರೇಕ್ಷಕ್ಕೆ ಒಳಗಾಗಿದ್ದಾರೆ. ಬಯಲು ಸೀಮೆಯಲ್ಲಿ ಈ ರೀತಿಯ ಬೆಳೆಗಳನ್ನು ಬೆಳೆಯುವುದು ಕಷ್ಟ ಎಂದುಕೊಂಡು ಸುಮ್ಮನಾಗಿದ್ವಿ, ಆದ್ರೆ ನಮ್ಮವರ ಈ ಸಾಧನೆಯನ್ನು ಕಂಡು ಇಂದು ನಾವು ಸೇಬು ಬೆಳೆಯೋದಕ್ಕೆ ಮುಂದಾಗಿದ್ದೇವೆ. ಸದ್ಯಕ್ಕೆ ಉತ್ತಮ ಬೆಳೆ ಬಂದಿದೆ ಅದ್ರಿಂದ ಲಾಭದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವೆ. ನಮ್ನ ಜಿಲ್ಲೆಯ ರೈತರಲ್ಲಿ ಮನವಿ ಮಾಡ್ಕೊಳ್ಳೋದ್ ಏನಂದ್ರೆ, ಈ ರೀತಿಯ ಬೆಳೆಗಳನ್ನು ನಮ್ಮ ಜಿಲ್ಲೆಯಲ್ಲಿ ಬೆಳಯಲು ನಾವು ಯೋಗ್ಯರಾಗಿದ್ದೀವಿ ನೀವು ಸಹ ಸೇಬು ಬೆಳೆದು ಅನುಕೂಲ ಪಡೆದುಕೊಳ್ಳಿ ಅಂತಾರೆ ರೈತರೊಬ್ಬರು.

ಒಟ್ಟಾರೆ  ಬರದನಾಡು ಕೋಟೆನಾಡಿನ ರೈತರು ಹಿಮಾಚಲದ ಸಿಹಿ ಸೇಬನ್ನು ಬೆಳೆದು ಮನಸೊಂದಿದ್ದರೆ ಮಾರ್ಗ ಎಂಬುದನ್ನು ಸಾಧಿಸಿದ್ದಾರೆ. ಹೀಗಾಗಿ ಸಂಬಂಧಪಟ್ಟ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇವರಿಗೆ ಮತ್ತಷ್ಟು ಉತ್ತೇಜನ ನೀಡಿದರೆ ಸೇಬಿನ ಪ್ರಯೋಗಾತ್ಮಕ ಕೃಷಿ ರಾಜ್ಯಕ್ಕೆ ಲಾಭ ತಂದು ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ.......,

PREV
Read more Articles on
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!