ಶೀಘ್ರ ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲು ಸೇವೆ : ಮಾಸಾಂತ್ಯಕ್ಕೆ ಟೆಂಡರ್

Kannadaprabha News   | Asianet News
Published : Aug 10, 2021, 12:09 PM IST
ಶೀಘ್ರ ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲು ಸೇವೆ : ಮಾಸಾಂತ್ಯಕ್ಕೆ ಟೆಂಡರ್

ಸಾರಾಂಶ

ಬೆಂಗಳೂರು ಉಪನಗರ  ರೈಲು ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ಪ್ರಥಮ ಹಂತದಲ್ಲಿ ಬೈಯಪ್ಪನಳ್ಳಿ-ಚಿಕ್ಕಬಾಣಾವರ ಕಾರಿಡಾರ್‌ ನಿರ್ಮಾಣ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಶೀಘ್ರ ಟೆಂಡರ್

 ಬೆಂಗಳೂರು (ಆ.10): ಬೆಂಗಳೂರು ಉಪನಗರ  ರೈಲು ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿರುವ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಪ್ರಥಮ ಹಂತದಲ್ಲಿ ಬೈಯಪ್ಪನಳ್ಳಿ-ಚಿಕ್ಕಬಾಣಾವರ ಕಾರಿಡಾರ್‌ ನಿರ್ಮಾಣ ಸಂಬಂಧ ಈ ಮಾಸಾಂತ್ಯದ ವೇಳೆಗೆ ಸಿವಿಲ್ ಕಾಮಗಾರಿಗೆ ಟೆಂಡರ್‌ ಆಹ್ವಾನಿಸುವ ಸಾಧ್ಯತೆ ಇದೆ. 

148.17 ಕಿ.ಮೀ ಉದ್ದದ 15,767 ಕೋಟಿ ರು. ಅಂದಾಜು ವೆಚ್ಚದ ಉಪ ನಗರ ರೈಲು ಯೊಜನೆಯಲ್ಲಿ ಪ್ರಮುಖವಾಗಿ ನಾಲ್ಕು ಕಾರಿಡಾರ್‌ಗಳು ಬರಲಿವೆ. ಈ ಪೈಕಿ ಕೆ ರೈಡ್ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಚಿಕ್ಕಬಾಣಾವರ ಹಾಗೂ ಹೀಲಳಿಗೆ ರಾಜಾನುಕುಂಟೆ ಕಾರಿಡಾರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.  

ಆ. 12ರಿಂದ ಅರಸೀಕೆರೆ- ಹುಬ್ಬಳ್ಳಿ ರೈಲು ಸಂಚಾರ

ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಕಾರಿಡಾರ್ ನಿರ್ಮಾಣ ಸಂಬಂಧ ಸಿವಿಲ್ ಕಾಮಗಾರಿಗೆ ಈ ಮಾಸಾಂತ್ಯದ ವೇಳೆಗೆ ಟೆಂಡರ್‌ ಅಹ್ವಾನಿಸಲು ಸಿದ್ದತೆ ನಡೆಸಲಾಗಿದೆ. ಮುಂದಿನ ಅಕ್ಟೋಬರ್‌ ನವೆಂಬರ್‌ ವೇಳೆಗೆ ಈ ಟೆಂಡರ್‌  ಪ್ರಕ್ರಿಯೆ ಮುಗಿಸಿ ಬಳಿಕ ಹೀಲಳಿಗೆ ರಾಜಾನುಕುಂಟೆ ಕಾರಿಡಾರ್ ಸಿವಿಲ್ ಕಾಮಗಾರಿಗೆ ಟೆಂಡರ್ ಕರೆಯಲು ಸಿದ್ದತೆ ನಡೆಸಲಾಗುತ್ತದೆ ಎಂದ ಕೆರೈಡ್ ಮೂಲಗಳು ತಿಳಿಸಿವೆ. 

ನೈಟ್ ಕರ್ಫ್ಯೂ: ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ ಸಮಯ ಬದಲಾವಣೆ

ಒಟ್ಟು 14 ನಿಲ್ದಾಣಗಳು ಈ ಮಾರ್ಗದಲ್ಲಿ ಇರಲಿವೆ. 

ಕೇಂದ್ರ ಸಚಿವ ಸಂಪುಟ ಅರ್ಥಿಕ ವ್ಯವಹಾರಗಳ ಸಮಿತಿ ಸದರಿ ಉಪನಗರ ರೈಲು ಯೋಜನೆಗೆ ಅನುಮೋದನೆ ನೀಡುವಾಗ ನಾಲ್ಕು ಕಾರಿಡಾರ್‌ ಪೈಕಿ ಆದ್ಯತೆ  ಮೇರೆಗೆ ಪೂರ್ಣಗೊಳಿಸಲು ನಿರ್ದೇಶನ ನೀಡಿದೆ. 

PREV
click me!

Recommended Stories

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ: ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!