ಹಾವೇರಿ: ಕಾರ ಹುಣ್ಣಿಮೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ರೈತನ ಮೇಲೆ ಹಲ್ಲೆ, ಪಟಾಕಿ ಸಿಡಿಸಿದ್ದೇ ತಪ್ಪಾಯ್ತಾ?

Kannadaprabha News   | Kannada Prabha
Published : Jun 30, 2026, 06:16 AM IST
naregal village Kara hunnime incident

ಸಾರಾಂಶ

ಕಾರ ಹುಣ್ಣಿಮೆ ದಿನದಂದು ಹೋರಿಗಳನ್ನ ಓಡಿಸುವ ಸ್ಪರ್ಧೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆಂದು ಅನ್ಯಕೋಮಿನ ಗುಂಪೊಂದು ರೈತನೋರ್ವನ ಕೈ  ಕಡಿದ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.

ಹಾನಗಲ್ಲ (ಜೂ.30): ಹಾವೇರಿ(Haveri) ಜಿಲ್ಲೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮ(Naregal village)ದಲ್ಲಿ ಕಾರಹುಣ್ಣಿಮೆ ಹಬ್ಬದಂಗವಾಗಿ ಸಂಪ್ರದಾಯದಂತೆ ಹೋರಿಗಳನ್ನು ಓಡಿಸುವ(Bull racing competition) ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಕಾರಣಕ್ಕೆ ಎರಡು ಕೋಮಿನ ಜನರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ಕೈ ಕಡಿಯಲಾಗಿದೆ. ಒಟ್ಟು 8 ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.

ಕಾರ ಹುಣ್ಣಿಮೆ: ನರೇಗಲ್ ಗ್ರಾಮದಲ್ಲಿ ನಡೆದಿದ್ದೇನು?

ಕಾರಹುಣ್ಣಿಮೆ ಅಂಗವಾಗಿ ನರೇಗಲ್ಲ ಗ್ರಾಮದಲ್ಲಿ ಪ್ರತಿ ವರ್ಷದಂತೆ ಸೋಮವಾರವೂ ಹೋರಿ ಓಡಿಸುವ ಕಾರ್ಯಕ್ರಮವಿತ್ತು. ಅದರಂತೆ ಮಧ್ಯಾಹ್ನ ರೈತರು ತಮ್ಮ ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಗ್ರಾಮದ ಮಸೀದಿ ಬಳಿ ಪಟಾಕಿ ಸಿಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಾಷಾಸಾಬ ಗೌಂಡಿ ಎಂಬುವರು ‘ನಮ್ಮ ಮಸೀದಿ ಬಳಿ ಏಕೆ ಪಟಾಕಿ ಸಿಡಿಸುತ್ತೀರಾ’ ಎಂದು ಪ್ರಶ್ನಿಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಹೋರಿ ಹಿಂದೆ ಬಂದಿದ್ದ ಲೋಹಿತ್ ಜಯಪ್ಪ(Lohit Jayappa) ಎಂಬುವರನ್ನು ಅನ್ಯಕೋಮಿನವರು ಥಳಿಸಿದರು. ಇದರಿಂದ ರೊಚ್ಚಿಗೆದ್ದ ಹಿಂದೂ ಯುವಕರ ಗುಂಪು ಕುಡುಗೋಲು ಮತ್ತಿತರ ಆಯುಧಗಳಿಂದ ಪ್ರತಿದಾಳಿ ನಡೆಸಿತು.

ಘರ್ಷಣೆಯಲ್ಲಿ ಶಿವರಾಜ್ ಕುರುಬರ (27), ನಾಗಪ್ಪ ಹನುಮಂತಪ್ಪ ಕುರುಬರ (34), ಮಲ್ಲಪ್ಪ ರಾಯಪ್ಪ ಕೊಡಸಂಗಿ (30), ನಿಂಗರಾಜ ಮಹಾಂತೇಶ ಕುರುಬರ (30), ಜಯಪ್ಪ ಸಂಗಪ್ಪ ಕುರುಬರ (20), ಲೋಹಿತ ರೇವಣಪ್ಪ ಕುರುಬರ (24), ಬಾಷಾಸಾಬ ಗೌಂಡಿ (55), ಖಾಜಾ ಗೌಂಡಿ (18) ಎಂಬುವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವರಾಜ ಕುರುಬರ, ಜಯಪ್ಪ ಕುರುಬರ ಹಾಗೂ ಲೋಹಿತ ಕುರುಬರ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಕೈ ಕಡಿಯಲಾಗಿದೆ. ಉಳಿದವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಿಂದಾಗಿ ನರೇಗಲ್ಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.

PREV
Read more Articles on
click me!

Recommended Stories

Pradeep Eshwar: ಚಪ್ಪಲಿ ಎಸೆತ ಕೇಸ್; ಜೆಡಿಎಸ್ ದೂರು ನೀಡಿದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ವಿರುದ್ಧ ಮತ್ತೊಂದು ದೂರು
ಮಲೆ ಮಹದೇಶ್ವರ ಬೆಟ್ಟದ ಬಳಿ KSRTC ಬಸ್ ಪಲ್ಟಿ, ಅಸಲಿ ಕಾರಣ ಬಿಚ್ಚಿಟ್ಟ ಎಸ್‌ಪಿ; 44 ಪ್ರಯಾಣಿಕರ ಪೈಕಿ ಇಬ್ಬರ ಸಾವು!