ಮಂಗಳೂರು: ಬಂಟ್ವಾಳ ಕ್ಷೇತ್ರಕ್ಕೆ 25 ಕೋಟಿ ರು. ಬಿಡುಗಡೆಗೆ ಆದೇಶ

By Kannadaprabha NewsFirst Published Aug 30, 2019, 10:28 AM IST
Highlights

ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳೆಪಾಡಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಂಟ್ವಾಳ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರು. ಒದಗಿಸುವಂತೆ ಮನವಿ ಮಾಡಿದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರು(ಆ.30): ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳೆಪಾಡಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಂಟ್ವಾಳ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 25 ಕೋಟಿ ರು. ಒದಗಿಸುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು.

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಬಿಡುಗಡೆಗೊಳಿಸಲು ಆದೇಶಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ನೀಡಿದ್ದ 10 ರು. ನೆರವಿನ ಚೆಕ್‌ ನ್ನು ಶಾಸಕ ಯು.ರಾಜೇಶ್‌ ನಾಯ್ಕ್ ಮುಖ್ಯಮಂತ್ರಿಗೆ ಹಸ್ತಾಂತರಿಸಿದರು.

click me!