ಸರ್ದಾರ್ ಪಟೇಲ್ ಹಾದಿಯಲ್ಲೇ ಅಮಿತ್ ಶಾ: ಸಿಎಂ ಬೊಮ್ಮಾಯಿ

Kannadaprabha News   | Asianet News
Published : Sep 03, 2021, 11:30 AM ISTUpdated : Sep 03, 2021, 11:58 AM IST
ಸರ್ದಾರ್ ಪಟೇಲ್ ಹಾದಿಯಲ್ಲೇ ಅಮಿತ್ ಶಾ: ಸಿಎಂ ಬೊಮ್ಮಾಯಿ

ಸಾರಾಂಶ

*  ಕನ್ನಡಿಗರ ಮೇಲೆ ಅಪಾರ ಪ್ರೀತಿ, ವಿಶ್ವಾಸ ಹೊಂದಿರುವ ಅಮಿತ್ ಶಾ  *  ದೇಶದ ಭವಿಷ್ಯ ರೂಪಿಸುವಲ್ಲಿ ಶಾ ಪಾತ್ರವೂ ಪ್ರಮುಖ *  ಜಮ್ಮು-ಕಾಶ್ಮೀರದ ಏಕತೆಗಾಗಿ ದಿಟ್ಟ ಹೆಜ್ಜೆ ಇಟ್ಟ ಅಮಿತ್ ಶಾ  

ದಾವಣಗೆರೆ(ಸೆ.03):  ಭಾರತದ ಅಖಂಡತೆ, ಐಕ್ಯತೆಗಾಗಿ ದಿಟ್ಟವಾಗಿ ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್‌ರ ನಂತರ ಪಟೇಲರಂತೆಯೇ ದೇಶದಲ್ಲಿ ಜಮ್ಮು-ಕಾಶ್ಮೀರದ ಏಕತೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ. 

ನಗರದ ಜಿಎಂಐಟಿ ಕಾಲೇಜಿನಲ್ಲಿ ಗುರುವಾರ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಮಿತ್ ಶಾ ಐತಿಹಾಸಿಕ ಸಾಧನೆ ತೋರಿದ್ದಾರೆ ಎನ್ನುತ್ತಾ ಅವರನ್ನು ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರೊಂದಿಗೆ ಹೋಲಿಸಿದರು.

ದಾವಣಗೆರೆಯಲ್ಲಿ ಅಮಿತ್ ಶಾ; ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

ಗಾಂಧಿ ನಾಡಿನಿಂದ ಬಂದ ಶಾರಿಂದಲೇ ದಾವಣಗೆರೆಯಲ್ಲಿ ಗಾಂಧಿ ಭವನ ಉದ್ಘಾಟನೆಯಾಗುತ್ತಿರುವುದು ನಿಜಕ್ಕೂ ಸಂತಸದ ಸಂಗತಿ. ಕನ್ನಡಿಗರ ಮೇಲೆ ಅಮಿತ್ ಶಾ ಅಪಾರ ಪ್ರೀತಿ, ವಿಶ್ವಾಸ ಹೊಂದಿದ್ದಾರೆ. ದೇಶದ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರವೂ ಪ್ರಮುಖವಾಗಿದೆ ಎಂದರು.
 

PREV
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!