ದಾವಣಗೆರೆ ಇತಿಹಾಸ ಪ್ರಸಿದ್ಧ ಕಡಕ್ ಚಮನ್ ಶಹಾವಲಿ ದರ್ಗಾಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಚಾದರ್ ಹೊದಿಸಿ ಪ್ರಾರ್ಥನೆ!

Published : Apr 02, 2026, 04:04 PM IST
Siddaramaiah visit Davanagere Darga

ಸಾರಾಂಶ

ದಾವಣಗೆರೆ ದಕ್ಷಿಣ ವಿಧಾನಸಭೆ ಉಪ ಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಜರತ್ ಸೈಯದ್ ಕಡಕ್ ಚಮನ್ ಶಹಾವಲಿ ದರ್ಗಾಕ್ಕೆ ಭೇಟಿ ನೀಡಿದರು. ಅವರು ದರ್ಗಾದಲ್ಲಿ ಚಾದರ್ ಹೊದಿಸಿ, ನಾಡಿನ ಏಳಿಗೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ದಾವಣೆಗೆರೆ (ಏ.02): ದಾವಣಗೆರೆ ದಕ್ಷಿಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ದಿವಂಗತ ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಮಲ್ಲಿಕಾರ್ಜುನ್ ಶ್ಯಾಮನೂರು ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದಾವಣಗೆರೆಯ ಹಳೆಪೇಟೆಯಲ್ಲಿರುವ ಇತಿಹಾಸ ಪ್ರಸಿದ್ಧ ಹಜರತ್ ಸೈಯದ್ ಕಡಕ್ ಚಮನ್ ಶಹಾವಲಿ ದರ್ಗಾಕ್ಕೆ ಭೇಟಿ ನೀಡಿ, ಚಾದರ್ ಹೊದಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಿಎಂ, ದರ್ಗಾಕ್ಕೆ ಭೇಟಿ ನೀಡಿ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದರು. ದರ್ಗಾಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ದರ್ಗಾದ ಧರ್ಮಗುರುಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಮುಖ್ಯಮಂತ್ರಿಗಳು ದರ್ಗಾದಲ್ಲಿ ಪವಿತ್ರ 'ಚಾದರ್' ಹೊದಿಸಿ, ನಾಡಿನ ಏಳಿಗೆಗಾಗಿ, ಜನರ ಸುಖ-ಸಮೃದ್ಧಿಗಾಗಿ ವಿಶೇಷ ದುವಾ (ಪ್ರಾರ್ಥನೆ) ಸಲ್ಲಿಸಿದರು. ಈ ಸಂದರ್ಭದಲ್ಲಿ ದರ್ಗಾದ ಪಾವಿತ್ರ್ಯತೆ ಹಾಗೂ ಅಲ್ಲಿನ ಇತಿಹಾಸದ ಬಗ್ಗೆ ಧರ್ಮಗುರುಗಳು ಸಿಎಂ ಅವರಿಗೆ ಮಾಹಿತಿ ನೀಡಿದರು.

ಸಚಿವ ಮಲ್ಲಿಕಾರ್ಜುನ ಸಾಥ್:

ಮುಖ್ಯಮಂತ್ರಿಗಳ ಈ ಭೇಟಿಯ ವೇಳೆ ರಾಜ್ಯದ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಸಾಥ್ ನೀಡಿದರು. ಸ್ಥಳೀಯ ನಾಯಕರಾಗಿರುವ ಮಲ್ಲಿಕಾರ್ಜುನ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ಸಮುದಾಯಗಳ ನಡುವಿನ ಸೌಹಾರ್ದತೆಯ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು. ದರ್ಗಾ ಭೇಟಿಯ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ರಾಜಕೀಯ ಮಹತ್ವ:

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆಯ ಕಣ ರಂಗೇರಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಈ ದರ್ಗಾ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರ ಸಂಖ್ಯೆ ಗಣನೀಯವಾಗಿದ್ದು, ಈ ಭೇಟಿಯು ಸಮುದಾಯದ ಮತದಾರರ ಮೇಲೆ ಧನಾತ್ಮಕ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಸದಾ "ಸರ್ವಜನಾಂಗದ ಶಾಂತಿಯ ತೋಟ" ಎಂಬ ತತ್ವಕ್ಕೆ ಒತ್ತು ನೀಡುತ್ತಾ ಬಂದಿದ್ದು, ಇಂದಿನ ದರ್ಗಾ ಭೇಟಿಯು ಅದಕ್ಕೆ ಸಾಕ್ಷಿಯಾಯಿತು.

PREV
Read more Articles on
click me!

Recommended Stories

ಉತ್ತರ ಕನ್ನಡದ ರೈತನ ತೋಟದ ವಿಸ್ಮಯ: ಒಂದೇ ಹಣ್ಣಿಗೆ 60 ಚಿಕ್ಕ ಚಿಕ್ಕ ಕಾಯಿಗಳು!
KSRTC ಬಸ್ ಸೀಟು ಹಿಡಿಯಲು ಹೋಗಿ ಚಕ್ರದಡಿಗೆ ಸಿಲುಕಿದ ಮಹಿಳೆ: ನಜ್ಜುಗುಜ್ಜಾದ ಕೈ, ಆಸ್ಪತ್ರೆಗೆ ದಾಖಲು!