ಸಿಎಂ ಬೆಂಗಾವಲು ವಾಹನ ಪಲ್ಟಿ : ಮೂವರಿಗೆ ಗಾಯ

Published : Oct 04, 2019, 12:24 PM IST
ಸಿಎಂ ಬೆಂಗಾವಲು ವಾಹನ ಪಲ್ಟಿ : ಮೂವರಿಗೆ ಗಾಯ

ಸಾರಾಂಶ

ಬೆಳಗಾವಿ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಬಾಗಲಕೋಟೆ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು ಈ ವೇಳೆ ಮೂವರು ಗಾಯಗೊಂಡಿದ್ದಾರೆ. 

ಬಾಗಲಕೋಟೆ [ಅ04]: ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ತೆರಳಿರುವ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಬಂದೋಬಸ್ತ್  ಪೊಲೀಸ್ ವಾಹನ ಪಲ್ಟಿಯಾಗಿದೆ. 

ಸಿಎಂ ಯಡಿಯೂರಪ್ಪ ಕಾರ್ಯಕ್ರಮಕ್ಕೆ  ಬಂದೂಬಸ್ತ್ ಗಾಗಿ ತೆರಳುತ್ತಿದ್ದ ಪೋಲಿಸ್ ವಾಹನ ಬಾಗಲಕೋಟೆ ಜಿಲ್ಲೆಯ ಸೈದಾಪುರದ ಕಪ್ಪಲಗುದ್ದಿ  ಕ್ರಾಸ್ ಬಳಿಯಲ್ಲಿ ಪಲ್ಟಿಯಾಗಿದೆ. ಈ ವೇಳೆ PSI ಸೇರಿ ಮೂವರು ಗಾಯಗೊಂಡಿದ್ದಾರೆ.  

ಇಳಕಲ್ ಠಾಣೆಯ ಪಿಎಸ್ ಐ ಕುಮಾರ್ ಹೆಡಕರ್ ಚಾಲಕ ಶಿವಾನಂದ, ಪೇದೆ ಮಂಜುನಾಥ ಅವರು ಗಾಯಗೊಂಡಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಂದು ಬೆಳಗಾವಿಗೆ ಸಿಎಂ ಆಗಮನ ಹಿನ್ನೆಲೆಯಲ್ಲಿ ಪೋಲಿಸರು ವಾಹನದೊಂದಿಗೆ ರಿಹರ್ಸಲ್ ನಲ್ಲಿ ತೊಡಗಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಬ್ಬಿನ ಹೊಲಕ್ಕೆ ನುಗ್ಗಿ ಪಲ್ಟಿಯಾಗಿದೆ.

ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತೆರಳಿದ್ದು  ಅಲ್ಲಿ ನೆರೆ ಸಂತ್ರಸ್ತರಿಗೆ ಕಟ್ಟಿಕೊಡಲಾಗುತ್ತಿರುವ ಮನೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

PREV
click me!

Recommended Stories

ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟನೆ; ₹3.25 ಕೋಟಿ ವೆಚ್ಚದಲ್ಲಿ ನಿರ್ಮಾಣ
GBA Clear footpath encroachments: ತೆರವು ಮಾಡಿದ ಫುಟ್‌ಪಾತಲ್ಲಿ ಮತ್ತೆ ವ್ಯಾಪಾರ ಶುರು!