ಕೊಡಗು: ಗುಂಡು ಹಾರಿಸಿಕೊಂಡು ಕಾಫಿ ವ್ಯಾಪಾರಿ ಆತ್ಮಹತ್ಯೆ

Published : Sep 27, 2019, 11:21 PM ISTUpdated : Sep 27, 2019, 11:28 PM IST
ಕೊಡಗು: ಗುಂಡು ಹಾರಿಸಿಕೊಂಡು ಕಾಫಿ ವ್ಯಾಪಾರಿ ಆತ್ಮಹತ್ಯೆ

ಸಾರಾಂಶ

ಗುಂಡು  ಹೊಡೆದುಕೊಂಡು ಕಾಫಿ ವ್ಯಾಪಾರಿ ಆತ್ಮಹತ್ಯೆ/ ಅಚ್ಚಿಯಂಡ ಎಸ್. ಸುನೀಲ್ (36) ಆತ್ಮಹತ್ಯೆಗೆ ಶರಣು/ ತಮ್ಮ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು  ಆತ್ಮಹತ್ಯೆ

ಮಡಿಕೇರಿ [ಸೆ. 27]  ದಕ್ಷಿಣ ಕೊಡಗಿನ ಹುದಿಕೇರಿಯ ಪಟ್ಟಣದಲ್ಲಿ ಕಾಫಿ  ಮತ್ತು ಕಾಳುಮೆಣಸು ವ್ಯಾಪಾರಿ ಅಚ್ಚಿಯಂಡ ಎಸ್. ಸುನೀಲ್ (36)ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುದಿಕೇರಿಯ ಮುಖ್ಯರಸ್ತೆಯಲ್ಲಿರುವ ಅವರ ಕಾಫಿ ಮಿಲ್  ಆವರಣದಲ್ಲಿರುವ ಕಚೇರಿಯಲ್ಲೇ  ತಮ್ಮ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು  ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಕೆಫೆ ಕಾಫಿ ಡೇ ಸಿದ್ದಾರ್ಥ್ ಸಾವಿನ ರಹಸ್ಯ

ಸುನಿಲ್ ಅವರು ಸುಮಾರು 10 ವರ್ಷದಿಂದ ವ್ಯಾಪಾರ ಮಾಡುತ್ತಿದ್ದರು. ಸುನೀಲ್  ಪತ್ನಿ,ಓರ್ವ ಪುತ್ರಿ,ಓರ್ವ ಪುತ್ರ ಇದ್ದಾರೆ.

PREV
click me!

Recommended Stories

ತುಂಗಭದ್ರಾ ಜಲಾಶಯ 33 ಗೇಟ್‌ ಬದಲಾವಣೆ ಕಾಮಗಾರಿ, 18ನೇ ಗೇಟ್ ಅಳವಡಿಕೆ ಬರೋಬ್ಬರಿ 15 ದಿನದಲ್ಲಿ ಯಶಸ್ವಿ
ಬಳ್ಳಾರಿ ಶೂಟೌಟ್ ಪ್ರಕರಣ: ಪೊಲೀಸರೇ ಆರೋಪಿಗಳಿಗೆ ಬಾಡಿಗಾರ್ಡ್ಸ್! ಗೃಹಸಚಿವರೇ ಅಸಮರ್ಥ, ಜನಾರ್ದನ ರೆಡ್ಡಿ ಕೆಂಡಾಮಂಡಲ