ಬೀದರ್‌: ಅಧಿಕಾರದ ದಾಹಕ್ಕಾಗಿ ರೋಗಿಗಳನ್ನೇ ಕೊಲ್ಲಲು ಮುಂದಾದ್ರಾ ವೈದ್ಯರು..?

Published : Feb 21, 2021, 11:56 AM ISTUpdated : Feb 21, 2021, 12:05 PM IST
ಬೀದರ್‌: ಅಧಿಕಾರದ ದಾಹಕ್ಕಾಗಿ ರೋಗಿಗಳನ್ನೇ ಕೊಲ್ಲಲು ಮುಂದಾದ್ರಾ ವೈದ್ಯರು..?

ಸಾರಾಂಶ

ಆಕ್ಷಿಜನ್ ಬಂದ್ ಮಾಡಿ ಪೈಪ್ ಕಟ್ ಮಾಡಿದ ಕಿರಾತಕರು| ಬೀದರ್‌ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದ ಘಟನೆ| ಕ್ಷಣಾರ್ಧದಲ್ಲೇ ಉಳಿಯಿತು ನಾಲ್ಕು ರೋಗಿಗಳ ಜೀವ| ಜೀವ ಉಳಿಸಬೇಕಾದ ವೈದ್ಯರೇ ಯಮಸ್ವರೂಪಿಗಳಾಗಲು ಹೊರಟ್ರಾ?| 

ಬೀದರ್(ಫೆ.21):  ಅಧಿಕಾರದ ದಾಹಕ್ಕಾಗಿ ದುಷ್ಟರು ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಪೈಪ್ ಕತ್ತರಿಸಿದ ಘಟನೆ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು, ಆದರೆ, ಆಸ್ಪತ್ರೆಯ ನಿರ್ದೇಶಕರ ಸಮಯಪ್ರಜ್ಞೆಯಿಂದ ನಾಲ್ಕು ರೋಗಿಗಳ ಜೀವ ಉಳಿದಿದೆ.

ಈ ಮೂಲಕ ಅಮಾಯಕರನ್ನ ಬಲಿ ಪಡೆಯಲು ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗಗಳು ಕಾಡಲಾರಂಭಿಸಿವೆ. ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಒಳ ಜಗಳ ಈಗ ರೋಗಿಗಳ ಪಾಲಿಗೆ ಮೃತ್ಯು ಆಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಹೀಗಾಗಿ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಬ್ಬು ನಾಟಿ ಮಾಡಿ ಟ್ರ್ಯಾಕ್ಟರ್‌ ಓಡಿಸಿದ ಕೃಷಿ ಸಚಿವ ಪಾಟೀಲ್‌

ವೈದ್ಯರುಗಳ ನಡುವೆ ಪ್ರಭಾವಿ ಹುದ್ದೆಗಾಗಿ ಪೈ ಪೋಟಿ ನಡೆಯುತ್ತಿದ್ದು ಹೆಸರು ಕೆಡಿಸುವ ಹುನ್ನಾರದಿಂದ ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ನಗರದ  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರಿಂದ ತನಿಖೆ ಮುಂದುವರೆದಿದೆ. 
 

PREV
click me!

Recommended Stories

FDA: ಆಹಾರ ಸುರಕ್ಷತೆಗೆ ಮಹಾರಾಷ್ಟ್ರಕ್ಕೂ ಮುನ್ನವೇ ದಾರಿ ತೋರಿಸಿದ್ದು ಕರ್ನಾಟಕ; ನಾವೇ ಟ್ರೆಂಡ್‌ ಸೆಟರ್‌ ಎಂದ ಕನ್ನಡದ ಖಡಕ್‌ ಆಫೀಸರ್!
ಬೆಂಗಳೂರಲ್ಲಿ ರಕ್ಕಸನಾದ ಪತಿ; ಪ್ರೀತಿಸಿ ಮದ್ವೆಯಾದ ಪತ್ನಿಯನ್ನ ಬರ್ಬರವಾಗಿ ಮುಗಿಸಿ ತಾನೂ ಪ್ರಾಣಬಿಟ್ಟ..