ಸೋಮಶೇಖರ್ ರೆಡ್ಡಿ ಬಂಧನ ಯಾಕಿಲ್ಲ: 'ಕೈ' ಕಾರ್ಯಕರ್ತರ ಆಕ್ರೋಶ

Published : Jan 20, 2020, 12:24 PM IST
ಸೋಮಶೇಖರ್ ರೆಡ್ಡಿ ಬಂಧನ ಯಾಕಿಲ್ಲ: 'ಕೈ' ಕಾರ್ಯಕರ್ತರ ಆಕ್ರೋಶ

ಸಾರಾಂಶ

ಪ್ರಚೋದನಕಾರಿ ಭಾಷಣ| ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮುಂದುವರೆದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ| ಸೋಮಶೇಖರ್ ರೆಡ್ಡಿ ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಅಭಿಯಾನ| 

ಬಳ್ಳಾರಿ‌(ಜ.20): ಪ್ರಚೋದನಕಾರಿ ಭಾಷಣ ಮಾಡಿದ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ. ಸೋಮಶೇಖರ್ ರೆಡ್ಡಿಯನ್ನ ಯಾವಾಗ ಬಂಧಿಸುತ್ತೀರಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. 

ಸೋಮಶೇಖರ್ ರೆಡ್ಡಿ ವಿರುದ್ಧ ಅಸಂಖ್ಯಾತ ದೂರುಗಳು ದಾಖಲಾಗಿದ್ರೂ ಯಾಕೆ ಇನ್ನೂ ಬಂಧನವಾಗಿಲ್ಲ? ಕಾನೂನು ಎಲ್ಲರಿಗೂ ಒಂದೇ, ಮೊದಲು ಬಂಧಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. 

‘ಮುಸ್ಲಿಮರು 10 ಮಕ್ಕಳನ್ನ ಹೆತ್ತರೆ, ಹಿಂದೂಗಳು 50 ಮಕ್ಕಳಿಗೆ ಜನ್ಮ ನೀಡುತ್ತೇವೆ’

ಕಾಂಗ್ರೆಸ್ ನಾಯಕರು ಎರಡೆರಡು ಬಾರಿ ಬಳ್ಳಾರಿ ಎಸ್ಪಿ ಹಾಗೂ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ. ಆದರೂ ಕೂಡ ಇನ್ನೂ ಸೋಮಶೇಖರ್ ರೆಡ್ಡಿಯನ್ನ ಬಂಧಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಕೂಡ ದೂರು ಸಲ್ಲಿಸಿದ್ದಾರೆ.
 

PREV
click me!

Recommended Stories

Siddaramaiah: ಅಚ್ಚೇ ದಿನ್ ಎಲ್ಲಿ, 15 ಲಕ್ಷ ಎಲ್ಲಿ? ಬಿಜೆಪಿಗೆ ಸವಾಲೆಸೆದು ತಮ್ಮ ರಾಜೀನಾಮೆ ಸತ್ಯ ಬಿಚ್ಚಿಟ್ಟ ಮಾಜಿ ಸಿಎಂ!
Gowrishankar SRG: ಕನ್ನಡದ ಅತ್ಯುತ್ತಮ ನಟ ಪ್ರಶಸ್ತಿ, 'ಕೆರೆಬೇಟೆ' ಸಿನಿಮಾ ನಾಯಕನಿಗೆ ಫಿಲ್ಮ್‌ಫೇರ್