'ಯಡಿಯೂರಪ್ಪ ಈಗ ಮೊಮ್ಮಕ್ಕಳ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ'

Suvarna News   | Asianet News
Published : Sep 29, 2020, 02:55 PM IST
'ಯಡಿಯೂರಪ್ಪ ಈಗ ಮೊಮ್ಮಕ್ಕಳ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ'

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬ ಕಾರ್ಪೊರೇಟ್ ಜಗತ್ತಿನ ಗುಲಾಮರಾಗಿದ್ದಾರೆ. ಹಣ ಪಡೆದುಕೊಳ್ಳುತ್ತಿರುವ ಅವರಿಗೆ ಜೈಲು ವಾಸ ಮಾಡಿದ ಪಶ್ಚತ್ತಾಪವೇ ಇಲ್ಲ ಎಂದು ಕೈ ಮುಖಂಡರೋರ್ವರು ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ (ಸೆ.29): ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಮಕ್ಕಳು ಸರ್ಕಾರ ಭ್ರಷ್ಟಾಚಾರಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಗುಲಾಮರಾಗಿದ್ದಾರೆ. ಈ ಹಿಂದೆ ಚೆಕ್ ಮೂಲಕ ಹಣ ಪಡೆಯುತ್ತಿದ್ದರು. ಈಗ ಆರ್‌ಟಿ ಜಿಎಸ್ ಮೂಲಕ ಮೊಮ್ಮಕ್ಕಳ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಆರೋಪಿಸಿದ್ದಾರೆ. 

ಶಿವಮೊಗ್ಗದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ 21 ದಿನಗಳ ಕಾಲ ಜೈಲು ವಾಸ ಎದುರಿಸಿದರೂ ಪಶ್ಚತ್ತಾಪ ಇಲ್ಲ. ಈ ರಾಜ್ಯವನ್ನು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂದು ಹೇಳಿದರು. 

ಈ ರಾಜ್ಯವನ್ನೇ ಕೊಳ್ಳೆ ಹೊಡೆಯಲು ಮಕ್ಕಳು ಮೊಮ್ಮಕ್ಕಳು ಸೇರಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿದ್ದರು. ಆದರೆ ಇದರ ಬಗ್ಗೆ ಇದುವರೆಗೂ ಚಕಾರವೆತ್ತಿಲ್ಲ. ಆಗಾಗ ರಾಜ್ಯದಲ್ಲಿ ಕೋಮು ಗಲಭೆ ಉಂಟಾಗಲಿ ಎನ್ನುವುದೇ ಅವರ ಉದ್ದೇಶ ಎಂದರು.

ಸಚಿವ ಕೆ ಎಸ್ ಈಶ್ವರಪ್ಪ ಕೂಡ ಗೋಹತ್ಯೆ ನಿಷೇಧ ಬಗ್ಗೆ ಮಾತನಾಡಿದ್ದವರು, ಈಗ ಮಾತೇ ಆಡುತ್ತಿಲ್ಲ . ನಗರಸಭೆ ಪಟ್ಟಣ ಪಂಚಾಯತಿ ಚುನಾವಣೆ ನಡೆದು ವರ್ಷವಾದರೂ ಗೆದ್ದವರಿಗೆ ಅಧಿಕಾರ ಸಿಕ್ಕಿಲ್ಲ . ಇದೊಂದು ಕುರುಡು ಸರ್ಕಾರ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಸಂಪುಟ ಸರ್ಕಸ್ ರೇಸ್‌ನಲ್ಲಿದ್ದಾರೆ ಈ ಪ್ರಬಲ ಆಕಾಂಕ್ಷಿಗಳು; ಯಾರು ಇನ್? ಯಾರು ಔಟ್? ...

ರಾಜ್ಯದಲ್ಲಿ ಪ್ರವಾಹ ಬಂದು ಸಾಯಲಿ, ಕೊರೊನಾ ಬಂದು ಸಾಯಲಿ ಅದರೆ ತಮಗೆ ಬರಬೇಕಾದದ್ದು ಬರಲಿ ಎಂಬ ಮನೋಭಾವದ ಸರ್ಕಾರ  ಇದು. ಯಡಿಯೂರಪ್ಪ ರೈತ ನಾಯಕರೇ ಅಲ್ಲ , ಅವರು ರೈತ  ಬೆಳೆದ ನಿಂಬೆಹಣ್ಣು ಮಾರಲು ಮಂಡ್ಯದಿಂದ ಶಿಕಾರಿಪುರಕ್ಕೆ ಬಂದವರಿಗೆ ರೈತ ನಾಯಕರೆಂದು ಹೇಳಿಕೊಳ್ಳುವ ಯೋಗ್ಯತೆ ಇಲ್ಲ. 

ಯಡಿಯೂರಪ್ಪ ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಗೋಪಾಲಕೃಷ್ಣ ಹೇಳಿದರು.

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!