ಸಂಸದ ಡಿಕೆ ಸುರೇಶ್ ಹೊಸ ಬಾಂಬ್ ಹಾಕಿದ್ದಾರೆ. ಸರ್ಕಾರದಿಂದಲೇ ಹೈ ಡ್ರಾಮಾ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಾಸನ (ಸೆ.10): ಕೊರೋನಾ ಭ್ರಷ್ಟಾಚಾರವನ್ನು ಮರೆಮಾಚಲು ರಾಜ್ಯ ಸರ್ಕಾರ ಡ್ರಗ್ಸ್ ದಂಧೆ ನಾಟಕವಾಡುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ಈ ಹಿಂದಿನಿಂದಲೂ ಇದೆ. ಇದು ಹೊಸತೇನಲ್ಲ, ಇದು ಪೊಲೀಸರ ಗಮನಕ್ಕೆ ಬಂದಿರಲಿಲ್ಲವಾ ಎಂದು ಪ್ರಶ್ನಿಸಿದರು.
ನಟಿಯರ ಬಂಧಿಸಿ ಪ್ರಚಾರ:
ಡ್ರಗ್ಸ್ ಮಾಫಿಯಾ ಮಟ್ಟಹಾಕಲು ಪೊಲೀಸರು ಹಾಗೂ ಸರ್ಕಾರ ವಿಫಲವಾಗಿದೆ. ನಟಿಯರನ್ನು ಬಂಧಿಸುವುದು ಮುಖ್ಯವಲ್ಲ, ಪ್ರಚಾರಕ್ಕಾಗಿ ನಟಿಯರನ್ನು ಬಂಧಿಸಲಾಗಿದೆ. ಮೊದಲು ಡ್ರಗ್ಸ್ ಮಾಫಿಯಾದ ಕಿಂಗ್ಪಿನ್ಗಳನ್ನು ಬಂಧಿಸಲಿ ಎಂದು ಸವಾಲು ಹಾಕಿದ ಸಂಸದರು, ಡ್ರಗ್ಸ್ ದಂಧೆಯಲ್ಲಿ ಪೊಲೀಸರು ಮತ್ತು ಅಧಿಕಾರಿಗಳ ಮಕ್ಕಳೇ ಶಾಮೀಲಾಗಿದ್ದಾರೆ ಎಂದರು.
'ಬಿಜೆಪಿಗೆ ಸಡ್ಡು ಹೊಡೆಯಲು ಕಾಂಗ್ರೆಸಿಗರಿಗೆ ತರಬೇತಿ' ..
ನಟಿಯರನ್ನು ಬಂಧಿಸಿ ಸರ್ಕಾರ ಸಾಧನೆ ಮಾಡಿದೆ ಎಂದುಕೊಂಡಿದ್ದಾರೆ. ಇದರ ಹಿಂದೆ ರಾಜಕಾರಣಿಗಳ ಮಕ್ಕಳು ಇದ್ದಾರೆ. ತನಿಖಾ ಸಂದರ್ಭದಲ್ಲಿ ಬೇರೆಯವರ ಹೆಸರು ಹೇಳಿದ್ರು ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸಿದರು.