ಬಿಜೆಪಿಯವರು ವ್ಯವಹಾರಕ್ಕಾಗಿ ಬಂದು ದೇಶ ಲೂಟಿ ಮಾಡಿ ಹೋಗ್ತಾರೆ: ಮಧು ಬಂಗಾರಪ್ಪ

Kannadaprabha News   | Asianet News
Published : Jul 25, 2021, 12:54 PM ISTUpdated : Jul 25, 2021, 01:03 PM IST
ಬಿಜೆಪಿಯವರು ವ್ಯವಹಾರಕ್ಕಾಗಿ ಬಂದು ದೇಶ ಲೂಟಿ ಮಾಡಿ ಹೋಗ್ತಾರೆ: ಮಧು ಬಂಗಾರಪ್ಪ

ಸಾರಾಂಶ

* ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ *  ಸಾಮಾನ್ಯ ಜನರ ಸೇವೆ ಮಾಡೋದು ಕಾಂಗ್ರೆಸ್ ಪಕ್ಷದ ಕೆಲಸ * ಜೆಡಿಎಸ್‌ ಬಗ್ಗೆ ನಂಗೆ ಗೊತ್ತಿಲ್ಲ ನಾನೀಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ 

ಕೊಪ್ಪಳ(ಜು.25):  ಭಾರತೀಯ ಜನತಾ ಪಾರ್ಟಿ ಅಂದರೆ, ಬ್ಯುಸಿನೆಸ್ ಜನತಾ ಪಾರ್ಟಿಯಾಗಿದೆ. ಬ್ಯುಸಿನೆಸ್ ಮಾಡಿಕೊಂಡು ವ್ಯವಹಾರ ಮಾಡಿ, ಕುದರದೆ ಹೋದರೆ ಅದು ಬಿದ್ದು ಹೋಗುತ್ತದೆ. ಆ ಹಂತದಲ್ಲಿ ಬಿಜೆಪಿ ಸರಕಾರ ಇದೆ. ಇದು ಕರ್ನಾಟಕದ ದುರಂತವೇ ಆಗಿದೆ ಅಂತ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವ್ಯವಹಾರಕ್ಕಾಗಿ ಬರ್ತಾರೆ. ಬಂದು ದೇಶ ಲೂಟಿ ಮಾಡಿ ಹಾಳು ಮಾಡಿ ಹೋಗುತ್ತಾರೆ. ಯಡಿಯೂರಪ್ಪರನ್ನ ತಗೆಯೋಕೆ ಕಾರಣ ಏನೆಂದು ಮಾಧ್ಯಮಗಳಿಗೆ ಗೊತ್ತಿದೆ. ಮತ್ಯಾಕೆ ನಾನು ಅದನ್ನ ಉಚ್ಚರಿಸಲಿ ಎಂದ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. 

'ಈಶ್ವರಪ್ಪಗೆ ಮುಖ್ಯಮಂತ್ರಿ ಸ್ಥಾನ ನೀಡಿ'

ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ. ಸಾಮಾನ್ಯ ಜನರ ಸೇವೆ ಮಾಡೋದು ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ. ಯಾವಾಗಾದ್ರೂ ಚುನಾವಣೆ ನಡೀಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಜೆಡಿಎಸ್‌ ಬಗ್ಗೆ ನಂಗೆ ಗೊತ್ತಿಲ್ಲ ನಾನೀಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ