ಪಿಯೂಶ್​ ಗೋಯಲ್​- ಶಾಸಕ ಆನಂದ್​ ಸಿಂಗ್​ ಭೇಟಿ: ಗರಿಗೆದರಿದ ರಾಜಕಾರಣ

Published : Dec 25, 2018, 10:35 AM IST
ಪಿಯೂಶ್​ ಗೋಯಲ್​- ಶಾಸಕ ಆನಂದ್​ ಸಿಂಗ್​ ಭೇಟಿ: ಗರಿಗೆದರಿದ ರಾಜಕಾರಣ

ಸಾರಾಂಶ

ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದರ ಮಧ್ಯದಲ್ಲಿಯೇ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಹಲವು ಕುತೂಹಲಗಳನ್ನು ಹುಟ್ಟು ಹಾಕಿದೆ.

ಬಳ್ಳಾರಿ, [ಡಿ.25]: ಹಂಪಿಗೆ ಭೇಟಿ ನೀಡಿದ್ದ ಬಿಜೆಪಿ ಕೇಂದ್ರ ಸಚಿವ ಪಿಯೂಶ್​ ಗೋಯಲ್​ ಅವರನ್ನು ಕಾಂಗ್ರೆಸ್​ ಶಾಸಕ ಆನಂದ್​ ಸಿಂಗ್​ ಭೇಟಿ ಮಾಡಿದ್ದು, ಹಲವು ಕುತೂಹಲಗಳಿಗೆ ಎಡೆಮಾಡಿ ಕೊಟ್ಟಿದೆ.

ನಿನ್ನೆ [ಸೋಮವಾರ] ವಿರೂಪಾಕ್ಷ ದೇವರ ದರ್ಶನ ಪಡೆಯುವವರೆಗೂ ಜತೆಯಲ್ಲೇ ಆನಂದ್ ಸಿಂಗ್,  ಕಮಲಾಪುರದ ರಜಪೂತ ಕೋಟೆಗೆ ಕೂಡ ಕರೆದುಕೊಂಡು ಹೋಗಿ ಸತ್ಕರಿಸಿ, ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. 

ಈ ಮೊದಲು ಬಿಜೆಪಿಯಲ್ಲೇ ಇದ್ದ ಆನಂದ್​ ಸಿಂಗ್​, 2018ರ ವಿಧಾನಸಭೆ ಚುನಾವಣೆ ಚುನಾವಣೆ ವೇಳೆ ಕಾಂಗ್ರೆಸ್​ಗೆ ಸೇರಿದ್ದರು. ಬಳಿಕ ರಾಜ್ಯ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.

ಆದ್ರೆ ಸಚಿವ ಸ್ಥಾನ ಸಿಕ್ಕಿಲ್ಲದಿದ್ದರಿಂದ ಅಸಮಾಧಾನಗೊಂಡಿರುವ ಆನಂದ್ ಸಿಂಗ್, ಕಾಂಗ್ರೆಸ್ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದು ಸೈಲೆಂಟ್ ಆಗಿದ್ದಾರೆ.  

PREV
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!