ಕೊರೋನಾದಿಂದ ರಾಜ್ಯ ವಿಲ ವಿಲ ಒದ್ದಾಡುತ್ತಿದೆ ಆದ್ರೆ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ತಿಲ್ಲ'

Kannadaprabha News   | Asianet News
Published : Jul 11, 2020, 11:49 AM IST
ಕೊರೋನಾದಿಂದ ರಾಜ್ಯ ವಿಲ ವಿಲ ಒದ್ದಾಡುತ್ತಿದೆ ಆದ್ರೆ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ತಿಲ್ಲ'

ಸಾರಾಂಶ

ಮಾನವ ಹಕ್ಕು ಆಯೋಗ ತನ್ನ ಕರ್ತವ್ಯದಿಂದ ವಿಮುಖವಾಗಿದೆ: ಶಾಸಕ ಎಚ್.ಕೆ. ಪಾಟೀಲ|ಗೌರವಯುತ ಸಂಸ್ಕಾರ, ಅಗತ್ಯ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇವೆ, ಸಕಾಲಕ್ಕೆ ಚಿಕಿತ್ಸೆ ಇವೆಲ್ಲವೂ ಮಾನವ ಹಕ್ಕುಗಳೇ ಆದರೆ ಸರ್ಕಾರ ಇವುಗಳ ಉಲ್ಲಂಘನೆ ಮಾಡುತ್ತಲೇ ಇದೆ|

ಗದಗ(ಜು.11): ಮಾನವ ಹಕ್ಕುಗಳ ಉಲ್ಲಂಘನೆ ತಡೆದು, ಅಂತಹ ಘಟನೆ ಮರುಕಳಿಸದಂತೆ ತಡೆದು ಸರ್ಕಾರವನ್ನು ಎಚ್ಚರಿಸುವುದು ಹಾಗೂ ಉಲ್ಲಂಘನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದು ಮಾನವ ಹಕ್ಕುಗಳ ಆಯೋಗದ ಕರ್ತವ್ಯವಾಗಿದೆ. ಆದರೆ ಪ್ರಸಕ್ತ ಕೋವಿಡ್ ಸಂದರ್ಭದಲ್ಲಿ ಆಯೋಗ ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಶಾಸಕ ಎಚ್.ಕೆ. ಪಾಟೀಲ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. 

ಪ್ರಸಕ್ತ ದಿನಗಳಲ್ಲಿ ಕೊರೋನಾದಿಂದ ರಾಜ್ಯ ವಿಲ ವಿಲ ಎಂದು ಒದ್ದಾಡುತ್ತಿದೆ. ಆದರೆ ಸರ್ಕಾರ ಯಾವುದೇ ಸ್ಪಷ್ಟವಾದ ನಿಲುವುಗಳಿಲ್ಲದೇ ಅಗತ್ಯ ಕ್ರಮ ಕೈಗೊಳ್ಳುವದರಲ್ಲಿ ವಿಫಲವಾಗಿದೆ. ಸೋಂಕಿತರನ್ನು ಕರೆದೊಯ್ಯಲು ಆಂಬ್ಯುಲೆನ್ಸ್‌ಗಳ ಸೇವೆ ಸರಿಯಾಗಿ ದೊರೆಯುತ್ತಿಲ್ಲ. ಇದರಿಂದ 2-3 ದಿನಗಳ ವರೆಗೆ ಸೋಂಕಿತರು ಆಸ್ಪತ್ರೆಗೆ ತೆರಳಲಾಗುತ್ತಿಲ್ಲ. ಇದಲ್ಲದೇ ಬಳ್ಳಾರಿ, ರಾಯಚೂರ, ದಾವಣಗೆರೆ, ಚಿತ್ರದುರ್ಗ ಬೆಂಗಳೂರಿನಲ್ಲಿ ಭಾವನೆಗಳಿಗೆ ಘಾಸಿಯಾಗುವ ರೀತಿ ಮೃತಪಟ್ಟ ಸೋಂಕಿತರ ಶವಸಂಸ್ಕಾರ ನಡೆದಿರುವುದು ಹೃದಯ ವಿದ್ರಾವಕ.

ಖರ್ಚಿಲ್ಲದೆ ಜಿಂಕೆ ಕಾಟ ತಪ್ಪಿಸಿಕೊಂಡ ರೈತ: ಕಾಡು ಪ್ರಾಣಿಗಳಿಗೆ ತೊಂದರೆಯಾಗದಂತೆ ಹೊಸ ಪ್ಲಾನ್‌..!

ಗೌರವಯುತ ಸಂಸ್ಕಾರ, ಅಗತ್ಯ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೇವೆ, ಸಕಾಲಕ್ಕೆ ಚಿಕಿತ್ಸೆ ಇವೆಲ್ಲವೂ ಮಾನವ ಹಕ್ಕುಗಳೇ. ಆದರೆ ಸರ್ಕಾರ ಇವುಗಳ ಉಲ್ಲಂಘನೆ ಮಾಡುತ್ತಲೇ ಇದೆ. ಹಗಲು ರಾತ್ರಿ ಈ ರೀತಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದ್ದರೂ ಆಯೋಗ ಮೂಕ ಪ್ರೇಕ್ಷಕನಾಗಿದೆಯೇ.? ಆಯೋಗ ಮಾನವ ಹಕ್ಕುಗಳ ಆಯೋಗವನ್ನು ವಿಶೇಷ ಉದ್ದೇಶಗಲಿಗೆ ಸ್ಥಾಪಿಸಲಾಗಿದ್ದು, ಜನರ ನಿರೀಕ್ಷೆಯತೆ ಕರ್ತವ್ಯ ನಿರ್ವಹಣೆಗೆ ಆಯೋಗ ಸನ್ನದ್ಧವಾಗಬೇಕು ಎಂದು ಶಾಸಕ ಎಚ್.ಕೆ. ಪಾಟೀಲ ಆಗ್ರಹಿಸಿದ್ದಾರೆ.
 

PREV
click me!

Recommended Stories

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!