ಹೊಸಪೇಟೆ ಬೆಂಜ್ ಕಾರು ಅಪಘಾತ: ಯಾರೆಲ್ಲಾ ಏನೆಲ್ಲಾ ಅಂದ್ರು ಗೊತ್ತಾ?

Suvarna News   | Asianet News
Published : Feb 13, 2020, 08:53 PM ISTUpdated : Feb 13, 2020, 09:04 PM IST
ಹೊಸಪೇಟೆ ಬೆಂಜ್ ಕಾರು ಅಪಘಾತ: ಯಾರೆಲ್ಲಾ ಏನೆಲ್ಲಾ ಅಂದ್ರು ಗೊತ್ತಾ?

ಸಾರಾಂಶ

ಹೊಸಪೇಟೆ ಬೆಂಜ್ ಕಾರು ಅಪಘಾತ ಪ್ರಕರಣ| ಕಾರಿನಲ್ಲಿ ಆರ್.ಅಶೋಕ್ ಪುತ್ರ ಇರುವುದು ನಿಜಾನಾ?| ಪುತ್ರನ ಉಪಸ್ಥಿತಿ ನಿರಾಕರಿಸಿದ ಆರ್.ಅಶೋಕ್| ಸರ್ಕಾರ ಪ್ರಭಾವಿ ವ್ಯಕ್ತಿಯ ಪುತ್ರನನ್ನು ರಕ್ಷಿಸುತ್ತಿದೆ ಎಂದ ಕಾಂಗ್ರೆಸ್| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಎಸ್. ಆರ್. ವಿಶ್ವನಾಥ್| ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಸತಿಶ್ ಜಾರಕಿಹೊಳಿ| 

ಬೆಂಗಳೂರು(ಫೆ.13): ಹೊಸಪೇಟೆ ಬೆಂಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅಂತೆ ಕಂತೆಗಳು ಹರಿದಾಡುತ್ತಿದ್ದು, ಈ ಕುರಿತು ಇದುವರೆಗೂ ಸ್ಪಷ್ಟ ಚಿತ್ರಣ ಹೊರ ಬಿದ್ದಿಲ್ಲ.

ಕಾರು ಅಪಘಾತದಲ್ಲಿ ಸಚಿವ ಆರ್.ಅಶೋಕ್ ಪುತ್ರನ ಹೆಸರು ಕೇಳಿ ಬಂದಿದ್ದು, ಈ ಆರೋಪವನ್ನು ಅಶೋಕ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

"

ಈ ಮಧ್ಯೆ ಹೊಸಪೇಟೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಆರ್.ಅಶೋಕ್  ಹೆಸರನ್ನು ಉಲ್ಲೇಖಿಸಲದೇ ಪ್ರಭಾವಿ ವ್ಯಕ್ತಿಯ ಪುತ್ರನನ್ನು ಉಳಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಹೇಳಿದೆ.

ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

"

ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

"

ಈ ಎಲ್ಲ ಬೆಳವಣಿಗೆಗಳ ಕುರಿತು ನಿಮ್ಮ ಸುವರ್ಣನ್ಯೂಸ್’ನಲ್ಲಿ ಬಿತ್ತರವಾದ ಸುದ್ದಿಗಳ ವಿಡಿಯೋ ಇಲ್ಲಿದೆ.

PREV
click me!

Recommended Stories

ಅಪಾಯಕಾರಿ ಬೆಂಗಳೂರು ವೀಲಿಂಗ್, ಮಾನ್ಯತಾ ಟೆಕ್ ಪಾರ್ಕ್ ಬಳಿ ಬುರ್ಕಾ ಧರಿಸಿದ ಯುವ ಜೋಡಿಯ ಅಪಾಯಕಾರಿ ಹುಚ್ಚಾಟ!
ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!