'ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಜಾಹೀರಾತು ಕೊಡಬೇಡಿ'

Published : May 13, 2021, 09:49 PM ISTUpdated : May 13, 2021, 09:53 PM IST
'ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಜಾಹೀರಾತು ಕೊಡಬೇಡಿ'

ಸಾರಾಂಶ

* ನನ್ನ ಜನ್ಮದಿನ ಆಚರಣೆ ಬೇಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ * ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಮನವಿ * ಇಡಿ ಜಗತ್ತು ಕೊರೋನಾ ಸಂಕಷ್ಟ ಎದುರಿಸುತ್ತಿದೆ *  ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಬೆಂಗಳೂರು:(ಮೇ 13)  ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ(ಮೆ 15) ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಪತ್ರಿಕಾ ಹೇಳಿಕೆಯಲ್ಲಿ ಶಿವಕುಮಾರ್ ಅವರು ಗುರುವಾರ ಮಾಡಿರುವ ಮನವಿ ಮಾಡಿಕೊಂಡಿದ್ದಾರೆ.

'ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೊರೋನಾ ರುದ್ರತಾಂಡವ ಆಡುತ್ತಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ವಿಹಿತವಲ್ಲ. ಹೀಗಾಗಿ ಈ ಬಾರಿ ನಾನೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ  ಎಂದು ತಿಳಿಸಿದ್ದಾರೆ.

ಸಂಸದರ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 

 

PREV
click me!

Recommended Stories

ನಾಡಪ್ರಭು ಕೆಂಪೇಗೌಡರ ಸೊಸೆ: ಕೋರಮಂಗಲದ ಲಕ್ಷ್ಮೀದೇವಿಯ ಈ ತ್ಯಾಗದ ಕಥೆ ಪ್ರತಿಯೊಬ್ಬ ಬೆಂಗಳೂರಿಗನಿಗೂ ತಿಳಿದಿರಲಿ!
ಆಗುಂಬೆ ಘಾಟ್ ಭೀಕರ ತಿರುವುಗಳಿಗೆ ಮುಕ್ತಿ: ಪಶ್ಚಿಮ ಘಟ್ಟದ ಸೌಂದರ್ಯ ಹಾಳುಗೆಡವದೇ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಜ್ಜು!