'ಜನ್ಮದಿನ ಆಚರಣೆ ಮಾಡಿಕೊಳ್ಳಲ್ಲ, ಜಾಹೀರಾತು ಕೊಡಬೇಡಿ'

By Suvarna NewsFirst Published May 13, 2021, 9:49 PM IST
Highlights

* ನನ್ನ ಜನ್ಮದಿನ ಆಚರಣೆ ಬೇಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ
* ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಮನವಿ
* ಇಡಿ ಜಗತ್ತು ಕೊರೋನಾ ಸಂಕಷ್ಟ ಎದುರಿಸುತ್ತಿದೆ
*  ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಬೆಂಗಳೂರು:(ಮೇ 13)  ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ(ಮೆ 15) ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ಪತ್ರಿಕಾ ಹೇಳಿಕೆಯಲ್ಲಿ ಶಿವಕುಮಾರ್ ಅವರು ಗುರುವಾರ ಮಾಡಿರುವ ಮನವಿ ಮಾಡಿಕೊಂಡಿದ್ದಾರೆ.

'ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೊರೋನಾ ರುದ್ರತಾಂಡವ ಆಡುತ್ತಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ವಿಹಿತವಲ್ಲ. ಹೀಗಾಗಿ ಈ ಬಾರಿ ನಾನೂ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ  ಎಂದು ತಿಳಿಸಿದ್ದಾರೆ.

ಸಂಸದರ ವಿರುದ್ಧ ಡಿಕೆ ಶಿವಕುಮಾರ್ ಗುಡುಗು

ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು.

ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 

 

ಕೊರೋನಾದಿಂದಾಗಿ ರಾಜ್ಯದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು‌ ನಿರ್ಧರಿಸಿದ್ದೇನೆ.

ಕೊರೋನಾ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಲಾಕ್‌ಡೌನ್ ಜಾರಿಗೊಳಿಸಿದ್ದು ಅದರ ಮಾರ್ಗಸೂಚಿಗಳನ್ನು ಅನುಸರಿಸುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ

— DK Shivakumar (@DKShivakumar)
click me!