ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರಗೆ ಕೊರೋನಾ ಧೃಢ

Kannadaprabha News   | Asianet News
Published : Sep 13, 2020, 10:29 AM IST
ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರಗೆ ಕೊರೋನಾ ಧೃಢ

ಸಾರಾಂಶ

ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರಗೆ ಕೊರೋನಾ| ಸೆ. 9ರಂದು ಬೆಂಗಳೂರಿಗೆ ತೆರಳಿದ್ದ ಭಯ್ಯಾಪುರ| ವೈದ್ಯರ ಬಳಿ ತೆರಳಿ ಪರೀಕ್ಷೆಗೆ ಒಳಗಾದ ಸಂದರ್ಭದಲ್ಲಿ ಕೊರೋನಾ ಸೋಂಕು ಧೃಢ| ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಯ್ಯಾಪುರ| 

ಕುಷ್ಟಗಿ(ಸೆ.13): ಕಾಂಗ್ರೆಸ್‌ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಅವರಿಗೆ ಕೊರೋನಾ ಸೋಂಕು ಧೃಢಪಟ್ಟಿದ್ದು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೆ. 9ರಂದು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಬಳಿ ತೆರಳಿ ಪರೀಕ್ಷೆಗೆ ಒಳಗಾದ ಸಂದರ್ಭದಲ್ಲಿ ಕೊರೋನಾ ಸೋಂಕು ಧೃಢ ಪಟ್ಟಿದೆ. ಆದರೆ, ಯಾವುದೇ ರೋಗದ ಲಕ್ಷಣಗಳಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಹನುಮೇಶ ಗುಮಗೇರಿ ತಿಳಿ​ಸಿ​ದ್ದಾ​ರೆ.

'ಒಂದೇ ವರ್ಷದಲ್ಲಿ ಹೊಲಕ್ಕೆ ನೀರು ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ'

ಇತ್ತೀಚಿನ ದಿನಗಳಲ್ಲಿ ಅವರ ನೇರ ಸಂಪರ್ಕಕ್ಕೆ ಬಂದವರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸ್ವಯಂ ಪರೀಕ್ಷೆಗೆ ಒಳಗಾಗಬೇಕು ಎಂದು ತಿಳಿ​ಸಿ​ದ್ದಾ​ರೆ. ಸದ್ಯ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 

PREV
click me!

Recommended Stories

ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ ಮುಂದಾದ ಸೈಬರ್ ಪೊಲೀಸರು
ಬೆಂಗಳೂರು to ಹುಬ್ಬಳ್ಳಿ ವಂದೇ ಭಾರತ್, ಜನಶತಾಬ್ದಿ ಸೇರಿ ಒಟ್ಟು 7 ರೈಲು ರದ್ದು! ಯಾವ ಜಿಲ್ಲೆಗಳಿಗೆ ಎಫೆಕ್ಟ್?