ರಾಣಿಬೆನ್ನೂರು: ಬೆಡ್‌ಗಾಗಿ ಆಸ್ಪತ್ರೆ ಎದುರು ಸೋಂಕಿತನ ಪ್ರತಿಭಟನೆ

Kannadaprabha News   | Asianet News
Published : May 26, 2021, 09:31 AM IST
ರಾಣಿಬೆನ್ನೂರು: ಬೆಡ್‌ಗಾಗಿ ಆಸ್ಪತ್ರೆ ಎದುರು ಸೋಂಕಿತನ ಪ್ರತಿಭಟನೆ

ಸಾರಾಂಶ

* ಹಾವೇರಿ ಜಿಲ್ಲೆಯ ರಾಣಿಬೆನ್ನೂರು ನಗರದಲ್ಲಿ ನಡೆದ ಘಟನೆ * ಆಸ್ಪತ್ರೆಯಲ್ಲಿ ಬೆಡ್‌ ಖಾಲಿಯಾದರೆ ನೀಡುವುದಾಗಿ ತಿಳಿಸಿದ್ದ ವೈದ್ಯರು  * ಅನಿವಾರ್ಯವಾಗಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಆತನ ಸಂಬಂಧಿಕರು  

ರಾಣಿಬೆನ್ನೂರು(ಮೇ.26): ಕೊರೋನಾದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಬೆಡ್‌ ಸಿಗದಿದ್ದರಿಂದ ಆಕ್ರೋಶಗೊಂಡು ನಗರದ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. 

ಮಂಗಳವಾರ ತಾಲೂಕಿನ ಮೆಣಸಿನಹಾಳ ಗ್ರಾಮದ ಸುಮಾರು 60 ವರ್ಷದ ವ್ಯಕ್ತಿಯೊಬ್ಬ ಕೊರೋನಾದಿಂದ ತೀವ್ರವಾಗಿ ಬಳಲುತ್ತಿದ್ದ ಕಾರಣ ಸಂಬಂಧಿಕರ ಜತೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಆಗಮಿಸಿದ್ದರು.

"

ಆದರೆ ಆಸ್ಪತ್ರೆಯಲ್ಲಿ ತಕ್ಷಣಕ್ಕೆ ಯಾವುದೇ ಬೆಡ್‌ಗಳು ಖಾಲಿಯಿಲ್ಲ. ಅವು ಖಾಲಿಯಾದರೆ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಬೇಸತ್ತ ರೋಗಿಯ ಸಂಬಂಧಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಗ ಆತನ ಸಂಬಂಧಿಕರು ಅನಿವಾರ್ಯವಾಗಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV
click me!

Recommended Stories

ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!
ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ