ಅಡಿಕೆ ಸಿಂಪರಣೆಗೆ ಡ್ರೋನ್ ಬಳಕೆ

Published : Aug 07, 2018, 03:19 PM IST
ಅಡಿಕೆ ಸಿಂಪರಣೆಗೆ ಡ್ರೋನ್ ಬಳಕೆ

ಸಾರಾಂಶ

ವಿವಿಧ ಕಾರಣಗಳಿಗಾಗಿ ಕೃಷಿಯಲ್ಲಿ ಡ್ರೋನ್ ಬಳಕೆ ಹೆಚ್ಚುತ್ತಿದ್ದು, ಅಡಕೆಗೆ ಔಷಧ ಸಿಂಪರಣಗೊ ಬಳಸಬಹುದಾಗಿದೆ. ಈ ಆಧುನಿಕ ತಂತ್ರಜ್ಞಾನದ ಬಗ್ಗೆ ರೈತರಿಗೆ ಅಗತ್ಯ ಮಾಹಿತಿ ನೀಡಲು ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ತೀರ್ಥಹಳ್ಳಿ: ಔಷಧಿ ಹೊಡೆಯಲು, ಕೀಟಗಳನ್ನು ನಾಶ ಮಾಡಲು..ಹೀಗೆ ವಿಧ ವಿಧವಾಗಿ ಕೃಷಿಯಲ್ಲಿ ಡ್ರೋನ್ ಬಳಸಲಾಗುತ್ತಿದೆ. ಇದರ ಬಗ್ಗೆ ಕೃಷಿಕರಲ್ಲಿ ಅರಿವು ಮೂಡಿಸಲು ಇಲ್ಲಿನ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಅಡಿಕೆ ಸಿಂಪರಣೆಯಲ್ಲಿ ಡ್ರೋನ್ ಬಳಕೆಯ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಂಡಿದೆ.

ಆಗಸ್ಟ್ 8, ಬುಧವಾರ ಈ ಪ್ರಾತ್ಯಕ್ಷಿಕೆಯು ಇಲ್ಲಿನ ಕೃಷಿ ಮತ್ತು ಸಂಶೋಧನಾ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ತೀರ್ಥಹಳ್ಳಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಮತ್ತು ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮದ ಸದುಪಡಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ಕೋರಿದ್ದಾರೆ.

PREV
click me!

Recommended Stories

ಕುಂದಾಪುರ–ತೀರ್ಥಹಳ್ಳಿ ಸಂಪರ್ಕಿಸುವ ಬಾಳೆಬರೆ ಘಾಟಿ ಸಂಪೂರ್ಣ ಬಂದ್! ಪರ್ಯಾಯವಾಗಿ ಈ ಮಾರ್ಗ ಬಳಸಿ
ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನ ಬಲಿ ಪಡೆದಿದ್ದ ನೀರಾನೆ 'ಹಂಸಿನಿ'ಯೂ ಸಾವು! ಕಾರಣವೇನು ಗೊತ್ತಾ?