ಬಿಜೆಪಿಯಿಂದ ಕೊರಟಗೆರೆಯಲ್ಲಿ ಅಭಿವೃದ್ಧಿ: ಅನಿಲ್‌

Published : Apr 17, 2023, 08:51 AM IST
 ಬಿಜೆಪಿಯಿಂದ ಕೊರಟಗೆರೆಯಲ್ಲಿ ಅಭಿವೃದ್ಧಿ: ಅನಿಲ್‌

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳು ಕೊರಟಗೆರೆ ಕ್ಷೇತ್ರದ ಪ್ರತಿಮನೆಗೂ ತಲುಪಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2023ಕ್ಕೆ ಮತ್ತೆ ಅಧಿಕಾರಕ್ಕೆ ಬರೋದು ಖಚಿತ. ನನಗೆ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಚ್‌.ಅನಿಲ್‌ಕುಮಾರ್‌ ಹೇಳಿದರು.

 ಕೊರಟಗೆರೆ :  ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳು ಕೊರಟಗೆರೆ ಕ್ಷೇತ್ರದ ಪ್ರತಿಮನೆಗೂ ತಲುಪಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2023ಕ್ಕೆ ಮತ್ತೆ ಅಧಿಕಾರಕ್ಕೆ ಬರೋದು ಖಚಿತ. ನನಗೆ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಚ್‌.ಅನಿಲ್‌ಕುಮಾರ್‌ ಹೇಳಿದರು.

ಕೊರಟಗೆರೆ ವಿಧಾನಸಭಾ ಕ್ಷೇತ್ರ ಪುರವಾರ ಹೋಬಳಿಯ ವೀರನಾಗೇನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿಗೆ ಕೊರಟಗೆರೆ ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ವಿಶೇಷ ಪೂಜೆಯ ನಂತರ ಬಿಜೆಪಿ ಪಕ್ಷದ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿಶ್ವನಾಯಕ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ನೀಡಿದ ಜನಪರ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ ಆಗಲಿದೆ. ಕೊರಟಗೆರೆ ಕ್ಷೇತ್ರವು ಕಳೆದ 30 ವರ್ಷದಿಂದ ಅಭಿವೃದ್ಧಿ ಆಗದೇ ಹಿಂದುಳಿದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದರೇ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು.

ಕೊರಟಗೆರೆ ಕ್ಷೇತ್ರದ ಪುರವಾರ ಹೋಬಳಿಯು ಕಳೆದ 30 ವರ್ಷದಿಂದ ಅಭಿವೃದ್ಧಿ ಕಾಣದೇ ಸಮಸ್ಯೆಯಾಗಿದೆ. ಪ್ರತಿನಿತ್ಯ ವ್ಯಾಸಂಗಕ್ಕೆ ತೆರಳಲು ಕನಿಷ್ಠ ಸರ್ಕಾರಿ ಬಸ್ಸಿನ ಸೌಲಭ್ಯವು ಸಿಗುತ್ತಿಲ್ಲ. ಗ್ರಾಮೀಣ ಪ್ರದೇಶದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಜನರ ಸಮಸ್ಯೆ ಆಲಿಸಲು ರಾಜಕೀಯ ನಾಯಕರು ಸಿಗುತ್ತಿಲ್ಲ. ಡಬಲ್‌ ಎಂಜಿನ್‌ ಸರ್ಕಾರದ ಅಭಿವೃದ್ಧಿಯ ಮೂಲಮಂತ್ರವೇ ನನ್ನ ಮುಂದಿನ ಗುರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಖಜಾಂಚಿ ಹನುಮಂತರಾಜು, ರೈತಮೋರ್ಚ ಅಧ್ಯಕ್ಷ ವಿಶ್ವನಾಥ, ಕೊರಟಗೆರೆ ಮಂಡಲ ಅಧ್ಯಕ್ಷ ಪವನಕುಮಾರ್‌, ಯುವಧ್ಯಕ್ಷ ಅರುಣ್‌.ಕೆ.ಎಸ್‌,ಮುಖಂಡರಾದ ಜಿ.ವೆಂಕಟಾಚಲಯ್ಯ, ದಾಸಾಲುಕುಂಟೆ ರಘು, ದಾಡಿವೆಂಕಟೇಶ್‌, ಪುರವಾರ ಲೊಕೇಶ್‌, ಗೋವಿಂದರಾಜು, ರವಿವರ್ಮ, ಶಿವರುದ್ರಯ್ಯ ಸೇರಿದಂತೆ ಇತರರು ಇದ್ದರು.

ಕೊರಟಗೆರೆ ಆಕಾಂಕ್ಷಿ ಅಭ್ಯರ್ಥಿಗಳ ಜೊತೆ ನಮ್ಮ ಪಕ್ಷದ ನಾಯಕರು ಮಾತುಕತೆ ನಡೆಸಿದ್ದಾರೆ. ನಮ್ಮ ನಾಯಕರಿಂದ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಪ್ರಯತ್ನ ನಡೆದಿದೆ. ವಿರೋಧ ಪಕ್ಷಗಳ ಬ್ರಹ್ಮಾಸ್ತ್ರ ಈ ಸಲ ಕೊರಟಗೆರೆ ಕ್ಷೇತ್ರದಲ್ಲಿ ನಡೆಯೋದಿಲ್ಲ. ನಮ್ಮ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೂಡಿ ನಾವು ಕೊರಟಗೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಕೊರಟಗೆರೆ ಕ್ಷೇತ್ರದ ಅಭಿವೃದ್ಧಿ9 ಮಾಡ್ತೇವೆ.

ಬಿ.ಎಚ್‌.ಅನಿಲ್‌ಕುಮಾರ್‌ ಬಿಜೆಪಿ ಅಭ್ಯರ್ಥಿ, ಕೊರಟಗೆರೆ

PREV
Read more Articles on
click me!

Recommended Stories

New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ