ಸಿಗದ ಸಚಿವ ಸ್ಥಾನ: ಅತೃಪ್ತ ಶಾಸಕರಿಂದ ಸಭೆ, ಬೆಲ್ಲದ ಹೇಳಿದ್ದೇನು?

Kannadaprabha News   | Asianet News
Published : Aug 11, 2021, 10:01 AM IST
ಸಿಗದ ಸಚಿವ ಸ್ಥಾನ: ಅತೃಪ್ತ ಶಾಸಕರಿಂದ ಸಭೆ, ಬೆಲ್ಲದ ಹೇಳಿದ್ದೇನು?

ಸಾರಾಂಶ

*  ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥ ಆಡಳಿತಗಾರ *  ಬೊಮ್ಮಾಯಿ ನಮ್ಮ ಭಾಗದವರಾಗಿದ್ದು, ಒಳ್ಳೆ ಕೆಲಸಗಳು ಆಗಲಿವೆ  *  ಸಭೆ ದಿನದಿಂದ ಸಚಿವ ಮುನೇನಕೊಪ್ಪ ಅವರರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದೇನೆ

ಧಾರವಾಡ(ಆ.11): ಅತೃಪ್ತ ಶಾಸಕರು ಸಭೆ ಮಾಡಿದ್ದಾರೆ ಎಂಬುದು ತಪ್ಪು ಮಾಹಿತಿ. ಅಂತಹದ್ದೇನೂ ಆಗಿಲ್ಲ. ಸುಮ್ಮನೆ ಮಾಧ್ಯಮಗಳಲ್ಲಿ ಸಭೆ ಮಾಡಿದ್ದಾರೆ ಎಂದು ಬಂದಿದೆ. ಮಾಧ್ಯಮಗಳಲ್ಲಿ ನೋಡಿದಾಗಲೇ ಈ ವಿಷಯ ನನಗೆ ತಿಳಿದಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥ ಆಡಳಿತಗಾರ. ಅತ್ಯಂತ ಓದಿದ, ಮೇಧಾವಿ, ಬುದ್ಧಿವಂತ ಮುಖ್ಯಮಂತ್ರಿಗಳು. ಅತೀ ಹೆಚ್ಚು ಪುಸ್ತಕ ಓದಿದ ರಾಜಕಾರಣಿಗಳ ಟಾಪ್‌ ಲಿಸ್ಟ್‌ನಲ್ಲಿ ಅವರಿದ್ದಾರೆ. ಅವರು ನಮ್ಮ ಭಾಗದವರಾಗಿದ್ದು, ಒಳ್ಳೆ ಕೆಲಸಗಳು ಆಗಲಿವೆ ಎಂದರು.

ಬಿಜೆಪಿ ಶಾಸಕ ಬೆಲ್ಲದ್‌ ಫೋನ್‌ ಕದ್ದಾಲಿಕೆ: ತನಿಖಾಧಿಕಾರಿ ಬದಲು

ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನಡೆಸಿದ ಸಭೆಗೆ ಗೈರಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಭೆ ಹಿಂದಿನ ದಿನವೇ ನನ್ನ ಜನ್ಮದಿನ ಇತ್ತು. ಹೀಗಾಗಿ ನಾನು ಊರಲ್ಲಿ ಇರಲಿಲ್ಲ. ಸಭೆ ದಿನದಿಂದ ಸಚಿವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನನ್ನ ಬೆಂಬಲಿಗರು ಬ್ಯಾನರ್‌ ಹರಿದಿರುವುದು ತಪ್ಪು. ಅವಸರದಲ್ಲಿ ನನ್ನ ಫೋಟೊ ಬಿಟ್ಟು ಹೋಗಿರಬಹುದಷ್ಟೇ ಎಂದ ಅವರು, ಉಳಿದ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದರು.
 

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ