ಧಾರವಾಡ: ಕೊರೋನಾ ಸೋಂಕಿತನ ಪ್ರಯಾಣದ ಹಿಸ್ಟರಿ ಬಹಿರಂಗ

Suvarna News   | Asianet News
Published : Mar 22, 2020, 12:44 PM IST
ಧಾರವಾಡ: ಕೊರೋನಾ ಸೋಂಕಿತನ ಪ್ರಯಾಣದ ಹಿಸ್ಟರಿ ಬಹಿರಂಗ

ಸಾರಾಂಶ

ಧಾರವಾಡದ ವ್ಯೆಕ್ತಿಗೆ ಕೊರೋನಾ ವೈರಸ್ ಸೋಂಕು ದೃಢ| ವೈರಸ್ ಸೋಂಕಿತ ವ್ಯಕ್ತಿಯ ಪ್ರಯಾಣದ ಮಾಹಿತಿ ಬಹಿರಂಗ|ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲು ಜಿಲ್ಲಾಧಿಕಾರಿ ದೀಪಾ ಚೋಳನ್ ಕರೆ| 

ಧಾರವಾಡ[ಮಾ.22]: ನಗರದ ಹೊಸಯಲ್ಲಾಪುರದ ನಿವಾಸಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ವೈರಸ್ ಸೋಂಕಿತ ವ್ಯಕ್ತಿಯ ಪ್ರಯಾಣದ ಮಾಹಿತಿಯನ್ನ ಜಿಲ್ಲಾಧಿಕಾರಿ ದೀಪಾ ಚೋಳನ್ ಬಹಿರಂಗ ಪಡಿಸಿದ್ದಾರೆ. 

ಈ ಬಗ್ಗೆ ಮಾಹಿತಿ ನೀಡಿದ ಅವರು,  ಸೋಂಕಿತ ವ್ಯೆಕ್ತಿಯು ಮಾ. 11  ರಂದು ಆಸ್ಟ್ರೇಲಿಯಾ ದೇಶದ ಪರ್ಥ್ ನಗರದಿಂದ  ಪ್ರಯಾಣ ಪ್ರಾರಂಭಿಸಿದ್ದಾನೆ. ಇಎ 421 ಎಮಿರೇಟ್ಸ್ ವಿಮಾನದ ಮೂಲಕ ದುಬೈ ತಲುಪಿದ್ದಾರೆ. ದುಬೈನಿಂದ ಓಮನ್ ಏರ್ ಲೈನ್ಸ್ ಮೂಲಕ 12.35 ಕ್ಕೆ ಮಸ್ಕತ್ ನಗರ ತಲುಪಿದ್ದಾರೆ. 12- 3-2020  ಮಧ್ಯಾಹ್ನ 2.45 ಕ್ಕೆ ಮಸ್ಕತ್ ನಗರದಿಂದ ಓಮನ್ ಏರ್ ಲೈನ್ಸ್ ಮೂಲಕ ಹೊರಟು ಸಂಜೆ 7 ಗಂಟೆಗೆ ಗೋವಾ ವಿಮಾನ ನಿಲ್ದಾಣ ತಲುಪಿದ್ದಾರೆ.

ಕೊರೋನಾ ಕಾಟ: ಧಾರವಾಡದ ವ್ಯೆಕ್ತಿಗೆ ಕೋವಿಡ್ 19 ಸೋಂಕು ದೃಢ

ಬಳಿಕ ಗೋವಾ ವಿಮಾನ ನಿಲ್ದಾಣದಿಂದ ಬಾಡಿಗೆ ಸ್ಕೂಟರ್ ಪಡೆದು ಪಣಜಿ ಬಸ್ ತಲುಪಿದ್ದಾರೆ, (12-3-2020) ಅದೇ  ರಾತ್ರಿ  8 .16 ನಿಮಿಷಕ್ಕೆ ವಾಹನ ಸಂಖ್ಯೆ : ಕೆ.ಎ. 26 ಎಫ್ 962 ಪಣಜಿ - ಗದಗ ಬೆಟಗೇರಿ ಕೆ.ಎಸ್.ಆರ್.ಟಿ.ಸಿ.ಬಸ್ ಮೂಲಕ ಪ್ರಯಾಣ ಮಾಡಿ, 13-3-2020 ರಂದು ಬೆಳಿಗ್ಗೆ 01 ಗಂಟೆಗೆ ಧಾರವಾಡ ಬಸ್ ನಿಲ್ದಾಣಕ್ಕೆ ಆಗಮಿಸಿರುತ್ತಾನೆ. ಅಲ್ಲಿಂದ ಆಟೋ ಮೂಲಕ ಧಾರವಾಡದ ತಮ್ಮ ಮನೆ ತಲುಪಿದ್ದಾರೆ.

ಅನಾರೋಗ್ಯದ ಕಾರಣ 17-03-2020 ಧಾರವಾಡದ ಸ್ಪಂದನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 18-03-2020 ರಿಂದ 21-03-2020 ರವರೆಗೆ ಓಪಿಡಿ ಸಂಖ್ಯೆ 6 ರೊಂದಿಗೆ ಎಸ್ ಡಿ ಎಂ ಆಸ್ಪತ್ರೆಯ ರೂಮ್ ನಂಬರ್ 4 ರಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ‘ಕೆನಡಾ ಪ್ರಜೆ’, ಜನರಲ್ಲಿ ಆತಂಕ

 ಈ ವ್ಯಕ್ತಿ ಪ್ರಯಾಣಿಸಿರುವ  ವಿಮಾನ, ಬಸ್, ಆಟೋ ಮೂಲಕ  ಪ್ರಯಾಣಿಸಿರುವವರು,  ಆತ ಭೇಟಿ ನೀಡಿರುವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಆ ಸಮಯದಲ್ಲಿ ಹಾಜರಿದ್ದ ಸಾರ್ವಜನಿಕರಿಗೂ ಸೋಂಕು  ತಗಲುವ ಸಾಧ್ಯತೆ ಇರುವುದರಿಂದ , ಅಂತಹವರು ತಮ್ಮ ಮನೆಯಿಂದ ಹೊರಬರದೇ ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು. ಕೋರೊನಾ ಸಹಾಯವಾಣಿ 104 ಮತ್ತು 1077 ನಂಬರ್ ಗಳಿಗೆ ಕರೆ ಮಾಡಿ ತಮ್ಮ ವಿವರಗಳನ್ನು ನೀಡಬೇಕು. ಹಾಗೂ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

PREV
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!