‘ವಿಜ್ಞಾನ’ ಪತ್ರಿಕೆಯ ಶತಮಾನೋತ್ಸವ | ‘ಕನ್ನಡ ಪತ್ರಿಕೆಗಳಲ್ಲಿ ವಿಜ್ಞಾನ’ ಸಂವಾದ | ನ್ಯಾಷನಲ್ ಕಾಲೇಜಿನಲ್ಲಿ ಕಾರ್ಯಕ್ರಮ
ಬೆಂಗಳೂರು: ‘ವಿಜ್ಞಾನ’ ಪತ್ರಿಕೆಯ ಶತಮಾನೋತ್ಸವದ ಅಂಗವಾಗಿ ಭಾನುವಾರ ‘ಕನ್ನಡ ಪತ್ರಿಕೆಗಳಲ್ಲಿ ವಿಜ್ಞಾನ’ ಎಂಬ ವಿಚಾರದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಿ.ವಿ. ಜಗದೀಶ್ ವಿಜ್ಞಾನ ಕೇಂದ್ರ, ಇಜ್ಞಾನ ಟ್ರಸ್ಟ್ ಮತ್ತು ಉದಯಭಾನು ಕಲಾಸಂಘವು ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಡಾ. ಎ.ಎಚ್. ರಾಮರಾವ್ ಇದನ್ನು ಉದ್ಘಾಟಿಸಲಿದ್ದಾರೆ.
ಕನ್ನಡದ ಮುದ್ರಣ ಮಾಧ್ಯಮ, ಟೀವಿ, ರೇಡಿಯೋ ಹಾಗೂ ಜಾಲತಾಣಗಳಲ್ಲಿ ವಿಜ್ಞಾನ ಸಂವಹನದ ಸ್ಥಿತಿ-ಗತಿಗಳನ್ನು ಕುರಿತು ಆಯಾ ಕ್ಷೇತ್ರದ ಪರಿಣತರೊಡನೆ ಈ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಇರಲಿದೆ.
ಸಂವಾದದಲ್ಲಿ, ಸುವರ್ಣನ್ಯೂಸ್.ಕಾಂ ನ ಮುಖ್ಯಸಂಪಾದಕ ಎಸ್.ಕೆ. ಶಾಮಸುಂದರ್, ಜಿ.ಕೆ. ರವೀಂದ್ರ ಕುಮಾರ್, ಟಿ.ಆರ್. ಶಿವಪ್ರಸಾದ್ ಮತ್ತು ರವಿಶಂಕರ್ ಭಟ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರೊ. ಎಸ್.ಎನ್. ನಾಗರಾಜ ರೆಡ್ಡಿ, ಪ್ರೊ. ಕೆ.ಎಸ್. ನಟರಾಜ್, ಎಂ. ನರಸಿಂಹ ಹಾಗೂ ಟಿ.ಜಿ. ಶ್ರೀನಿಧಿ ಕೂಡಾ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ: ಬಿ.ವಿ. ಜಗದೀಶ್ ವಿಜ್ಞಾನ ಕೇಂದ್ರ, ನ್ಯಾಷನಲ್ ಕಾಲೇಜು, ಜಯನಗರ, ಬೆಂಗಳೂರು. ಬೆಳಗ್ಗೆ 10 ಗಂಟೆಗೆ
ತಲುಪುವುದು ಹೇಗೆ:
'ವಿಜ್ಞಾನ'ದ ಬಗ್ಗೆ:
ದಿವಂಗತ ಬೆಳ್ಳಾವೆ ವೆಂಕಟನಾರಣಪ್ಪ ಹಾಗೂ ನಂಗಪುರಂ ವೆಂಕಟೇಶ ಅಯ್ಯಂಗಾರರು 1918ರಲ್ಲಿ ಪ್ರಾರಂಭಿಸಿದ್ದ 'ವಿಜ್ಞಾನ' ಪತ್ರಿಕೆ ಕನ್ನಡ ಪತ್ರಿಕೋದ್ಯಮದಲ್ಲೊಂದು ಮಹತ್ವದ ಮೈಲಿಗಲ್ಲು. ವಿಜ್ಞಾನ ಬರಹಗಳನ್ನು ಸಾಮಾನ್ಯ ಓದುಗರಿಗೂ ಪರಿಚಯಿಸಿದ ಕನ್ನಡದ ಮೊದಲ ವಿಜ್ಞಾನ ಪತ್ರಿಕೆ. 'ವಿಜ್ಞಾನ' ಪ್ರಕಟವಾಗಿ ಇದೀಗ ನೂರು ವರ್ಷ ಸಂದಿದೆ.