ಆ.23ಕ್ಕೆ ಯುವರಾಜ್ ಕುಮಾರ್, ಶ್ರೀದೇವಿ ನಡುವೆ ವಿಚ್ಛೇದನ ಕೌನ್ಸೆಲಿಂಗ್‌

Published : Jul 05, 2024, 10:08 AM ISTUpdated : Jul 07, 2024, 12:14 PM IST
ಆ.23ಕ್ಕೆ ಯುವರಾಜ್ ಕುಮಾರ್, ಶ್ರೀದೇವಿ ನಡುವೆ ವಿಚ್ಛೇದನ ಕೌನ್ಸೆಲಿಂಗ್‌

ಸಾರಾಂಶ

ವಿಚ್ಛೇದನದ ಮೊರೆಹೋಗಿರುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ನಡುವಿನ ಕೌನ್ಸೆಲಿಂಗ್‌ಗೆ ಕೌಟುಂಬಿಕ ನ್ಯಾಯಾಲಯ ಆ.23ರಂದು ದಿನಾಂಕ ನಿಗದಿಪಡಿಸಿದೆ.   

ಬೆಂಗಳೂರು(ಜು.05):  ವಿಚ್ಛೇದನದ ಮೊರೆಹೋಗಿರುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ನಡುವಿನ ಕೌನ್ಸೆಲಿಂಗ್‌ಗೆ ಕೌಟುಂಬಿಕ ನ್ಯಾಯಾಲಯ ಆ.23ರಂದು ದಿನಾಂಕ ನಿಗದಿಪಡಿಸಿದೆ. ವಿವಾಹ ವಿಚ್ಛೇದನ ಕೋರಿ ಯುವರಾಜ್ ಕುಮಾರ್ ಸಲ್ಲಿಸಿದ್ದ ಅರ್ಜಿಯು ಗುರುವಾರ ನಗರದ ಒಂದನೇ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಎಸ್.ಕಲ್ಪನಾ ಅವರ ಮುಂದೆ ವಿಚಾರಣೆಗೆ ಬಂದಿತ್ತು.

ಶ್ರೀದೇವಿ ಪರ ವಕೀಲರು ಹಾಜರಾಗಿ, ಯುವ ಅವರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ, ವಾದ ಮಂಡಿಸಲು ಅವಕಾಶ ಕೋರಿದರು. ಅದಕ್ಕೆ ಒಪ್ಪದ ನ್ಯಾಯಾಧೀಶರು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಂತರ ಸುಪ್ರಿಂಕೋರ್ಟ್ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ. ಅದರಂತೆ ಪಕ್ಷಕಾರರ ನಡುವೆ ಕೌನ್ಸೆಲಿಂಗ್‌ ನಡೆಸಬೇಕಾಗುತ್ತದೆ. ಅದಕ್ಕಾಗಿ ಪ್ರಕರಣವು ಮೊದಲು ಮಧ್ಯಸ್ಥಿಕ ಕೇಂದ್ರಕ್ಕೆ ಶಿಫಾರಸು ಆಗಬೇಕು. 

ಉಸಿರಲ್ಲಿ ಉಸಿರಾಗಿದ್ದವರಿಗೆ ಅವಕಾಶವೇ ಸಿಗ್ಲಿಲ್ಲ... ಅವಕಾಶವಿದ್ರೂ ಒಟ್ಟಿಗೇ ಬಾಳಲ್ಲ .. ಏನಿದು ವಿಚಿತ್ರ ದೇವ್ರೇ?

ಕೇಂದ್ರದಲ್ಲಿ ಅರ್ಜಿದಾರ ಮತ್ತು ಪ್ರತಿವಾದಿ (ಪಕ್ಷಕಾರರು) ನಡುವೆ ಸಮಾಲೋಚನೆ ನಡೆಯಬೇಕು. ಅವರು ತೀರ್ಮಾನ ತಿಳಿಸಿದ ನಂತರವಷ್ಟೇ ಆಕ್ಷೇಪಣೆ ಮೇಲೆ ವಾದ ಮಂಡನೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಂತರ ನ್ಯಾಯಾಧೀಶರು, ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಶಿಫಾರಸು ಮಾಡಿದರು.

PREV
Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ