ಮಂಡ್ಯ (ಜೂ.29): ಕೊರೋನಾದಿಂದ ಮೃತಪಟ್ಟವರ ಪೈಕಿ ಸುಮಾರು ಅರ್ಧದಷ್ಟು ಜನರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಶಾಸಕ ಸುರೇಶ್ ಗೌಡ ಆರೋಪಿಸಿದರು.
ಮಂಡ್ಯದಲ್ಲಿ ಸೋಮವಾರ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಸಕಾಲದಲ್ಲಿ ಸೋಂಕಿತರಿಗೆ ವೈದ್ಯರಿಂದ ಸಮರ್ಪಕ ಚಿಕಿತ್ಸೆ ದೊರಕಿದ್ದರೆ ಸಾವಿನ ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಬಹುದಿತ್ತು ಎಂದರು.
ಕರ್ನಾಟಕದಲ್ಲಿ ಕೊರೋನಾ ರಿಲೀಫ್: 3 ಸಾವಿರಕ್ಕಿಂತ ಕಡಿಮೆ ಕೇಸ್! ...
ನನಗೆ ಗೊತ್ತಿರುವವರಿಗೆ ಒಂದು ವಾರವಾದರೂ ವೈದ್ಯರು ಸರಿಯಾದ ಚಿಕಿತ್ಸೆ ನೀಡಿರಲಿಲ್ಲ. ಆತ ಬದುಕುಳಿಯಲೇ ಇಲ್ಲ. ಕೇವಲ ಇದೊಂದೆ ಪ್ರಕರಣವಲ್ಲ. ಹಲವಾರು ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಸುರೇಶ್ ಗೌಡ ಹೇಳಿದರು.