Koppal: ಚಂದ್ರಗಿರಿ ಬೆಟ್ಟದಲ್ಲಿ ಆದಿಮಾನವ ಕಾಲದ ಗವಿಚಿತ್ರಗಳು ಪತ್ತೆ!

Published : Feb 22, 2023, 11:29 AM IST
Koppal: ಚಂದ್ರಗಿರಿ ಬೆಟ್ಟದಲ್ಲಿ ಆದಿಮಾನವ ಕಾಲದ ಗವಿಚಿತ್ರಗಳು ಪತ್ತೆ!

ಸಾರಾಂಶ

ಕೊಪ್ಪಳ ತಾಲೂಕಿನ ಚಂದ್ರಗಿರಿ ಬೆಟ್ಟಪ್ರದೇಶದಲ್ಲಿ ಶಿಲಾಯುಗದ ಆದಿಮಾನವನ ಗವಿಚಿತ್ರಗಳು ಬೆಳಕಿಗೆ ಬಂದಿವೆ. ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಮತ್ತವರ ತಂಡ ಈ ಚಿತ್ರಗಳುಳ್ಳ ಗವಿಯನ್ನು ಶೋಧಿಸಿದೆ. ಹಿಟ್ನಾಳ್‌ ಹೋಬಳಿಯ ಅಚಲಾಪುರ ಸೀಮೆಯ ಚಂದ್ರಗಿರಿ ಗ್ರಾಮದ ಹತ್ತಿರವಿರುವ ಬೆಟ್ಟದಲ್ಲಿ ಕಂಡು ಬಂದಿದೆ.

ಕೊಪ್ಪಳ (ಫೆ.22) : ಕೊಪ್ಪಳ ತಾಲೂಕಿನ ಚಂದ್ರಗಿರಿ ಬೆಟ್ಟಪ್ರದೇಶದಲ್ಲಿ ಶಿಲಾಯುಗದ ಆದಿಮಾನವನ ಗವಿಚಿತ್ರಗಳು ಬೆಳಕಿಗೆ ಬಂದಿವೆ. ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಮತ್ತವರ ತಂಡ ಈ ಚಿತ್ರಗಳುಳ್ಳ ಗವಿಯನ್ನು ಶೋಧಿಸಿದೆ. ಹಿಟ್ನಾಳ್‌ ಹೋಬಳಿಯ ಅಚಲಾಪುರ ಸೀಮೆಯ ಚಂದ್ರಗಿರಿ ಗ್ರಾಮದ ಹತ್ತಿರವಿರುವ ಬೆಟ್ಟದಲ್ಲಿ ಕಂಡು ಬಂದಿದೆ.

ಭೂತಪ್ಪನ ಹೊಲದ ಉತ್ತರ ಮೇರೆಗೆ ಇರುವ ಈ ಗವಿಗೆ ಜೇನುಕಲ್ಲು ಗವಿ(Jenukallu gavi) ಎಂದು ಸ್ಥಳೀಯರು ಕರೆಯುತ್ತಾರೆ. ಅರೇ ವೃತ್ತಾಕಾರದಲ್ಲಿ ಕಲ್ಲಾಸರೆಯಂತಿರುವ ಈ ಗವಿ ಪೂರ್ವ ಪಶ್ಚಿಮವಾಗಿ 30 ಅಡಿ ಉದ್ದವಾಗಿ, ಮಧ್ಯದಲ್ಲಿ 10 ಅಡಿ ಅಗಲವಾಗಿ ಹಾಗೂ 25 ಅಡಿ ಎತ್ತರವಾಗಿದೆ. ನೆಲಮಟ್ಟದಿಂದ ಗವಿ ಬೆಟ್ಟ(Gavi betta)ದಲ್ಲಿ ಸುಮಾರು 100 ಮೀಟರ ಎತ್ತರದಲ್ಲಿದೆ. ಗವಿಯು ಆದಿಮಾನವನ(primitive man) ವಾಸಸ್ಥಾನವಾಗಿದ್ದು ಗವಿಯಲ್ಲಿ ಹಾಳು ಮಣ್ಣು ,ವಿಶಿಷ್ಟಅಲಂಕರಣೆಯ ಮಡಿಕೆ ಚೂರುಗಳು, ಚರ್ಚ್‌ ಶಿಲೆಯ ತುಂಡುಗಳು ಹಾಗೂ ಅಸ್ಥಿ ಅವಶೇಷಗಳು ಕಂಡುಬಂದಿವೆ. ಜತೆಗೆ ಗವಿಯ ಹಿಂಬದಿಯ ವಿಶಾಲ ಗೋಡೆಯ ತುಂಬೆಲ್ಲ ಕೆಂಪುವರ್ಣದಲ್ಲಿ ಬಿಡಿಸಿರುವ ಹಲವಾರು ಚಿತ್ರಗಳಿವೆ.

ಕೊಪ್ಪಳ: ವಿದ್ಯಾರ್ಥಿ ವೇತನ ಅರ್ಜಿ ಹಾಕಲು ತೆರೆದುಕೊಳ್ಳದ ವೆಬ್‌ಸೈಟ್‌

ಅವುಗಳಲ್ಲಿ ಕಾಲುಗಳನ್ನು ವಕ್ರ ಮಾಡಿ ಕೈಗಳನ್ನು ಮೇಲಕ್ಕೆ ಎತ್ತಿ ನಿಂತಿರುವ ಮನುಷ್ಯ, ನಾಲ್ಕು ಸಹಜ ಮನುಷ್ಯ ಚಿತ್ರಗಳು, ಕಡ್ಡಿ ಆಕೃತಿಯ ಎಂಟು ಮನುಷ್ಯ ಚಿತ್ರಗಳು, ಒಂದು ಪೂರ್ಣ ರೂಪದ ಕೋಣನ ಚಿತ್ರ, ಹಂದಿಯ ಮುಖ, ಹಸ್ತ ಮುದ್ರೆ ಹಾಗೂ ಚೌಕ ಮಂಡಲಗಳ ಚಿತ್ರಗಳಿವೆ. ಮನುಷ್ಯ ಹಾಗೂ ಕೋಣದ ಮುಂಡದ ತುಂಬಾ ವಕ್ರ ರೇಖೆಗಳನ್ನು ಹಾಕಲಾಗಿದೆ. ಹಾಗಾಗಿ ಬೇಟೆಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಆಚರಣೆಯ ಭಾಗವಾಗಿ ಚಿತ್ರಗಳನ್ನು ರಚಿಸಿರುವುದು ತಿಳಿಯುತ್ತದೆ. ಈ ಚಿತ್ರಗಳು ಹಿರೇಬೆಣಕಲ…, ಮಲ್ಲಾಪುರಗಳಲ್ಲಿ ಕಂಡುಬಂದಿರುವ ಚಿತ್ರಗಳಿಗೆ ಹೋಲಿಕೆಯಾಗುತ್ತವೆ. ಸುಮಾರು ಹದಿನೈದಕ್ಕೂ ಹೆಚ್ಚಿನ ಚಿತ್ರಗಳು ವಿವಿಧ ಕಾಲಘಟ್ಟಗಳಲ್ಲಿ ರಚಿಸಲ್ಪಟ್ಟಿವೆ. ಚಿತ್ರಗಳ ಶೈಲಿ, ವರ್ಣ ಹಾಗೂ ಗವಿಯಲ್ಲಿ ದೊರೆಯುತ್ತಿರುವ ಮಡಕೆಚೂರು,ಚರ್ಚ್‌ ಶಿಲೆಯ ಚೂರುಗಳ ಆಧಾರದ ಮೇಲೆ ಇಲ್ಲಿಯ ಚಿತ್ರಗಳು ಶಿಲಾತಾಮ್ರಯುಗದ ಕೊನೆಯ ಹಂತ (ಪ್ರ.ಶ.ಪೂ.1400-800),ಕಬ್ಬಿಣ ಯುಗದ ಬೃಹತ್‌ ಶಿಲಾ ಸಂಸ್ಕೃತಿಯ ಆದಿಮಧ್ಯಭಾಗದ (ಪ್ರ.ಶ.ಪೂ.1000-500) ಕಾಲದವೆಂದು ನಿರ್ಣಯಿಸಬಹುದು. ಈ ಚಿತ್ರಗಳಿಂದ ಕೊಪ್ಪಳ ಪ್ರದೇಶದ ಆದಿಮಾನವನ ಜೀವನ ಸಂಸ್ಕೃತಿಯ ಬಗ್ಗೆ ಮತ್ತಷ್ಟುತಿಳಿದುಕೊಳ್ಳಲು ಆಸ್ಪದವಾತಾಗಿದೆ ಎಂದು ಡಾ.ಶರಣಬಸಪ್ಪ ಕೋಲ್ಕಾರ ತಿಳಿಸಿದ್ದಾರೆ.

ಉಡುಪಿಯ ಅಡ್ಕದಕಟ್ಟೆಯ ಬಳಿ ತ್ರಿಕೋನಾಕಾರದ ಶಾಸನ ಪತ್ತೆ!

ಈ ಚಿತ್ರಗಳ ಶೋಧನೆಯಲ್ಲಿ ವಿದ್ಯಾರ್ಥಿ ಶರಣಪ್ಪ ಲಮಾಣಿ(Sharanappa lamani) ಹಾಗೂ ಬಂಡಿಹರ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಎಡ್ವರ್ಡ್‌ ಅನಿಲ್‌(Edward Anil,), ಡಾ.ನಿಂಗಪ್ಪ ಕಂಬಳಿ(Ningappa Kambali), ಕೃಷ್ಣಮೂರ್ತಿ ಬೇಲೂರು(Krishnamurthy) ಗಡ್ಡೆಪ್ಪ ನೆರವಾಗಿದ್ದಾರೆ ಎಂದು ಕೋಲ್ಕಾರ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ