ಅಫ್ಘಾನಿಸ್ತಾನ ಬಳಿಕ ಹಾಸನದಲ್ಲೂ ಭೂಕಂಪನ: ಬೆಚ್ಚಿಬಿದ್ದ ಜನತೆ

Published : Jun 23, 2022, 07:58 AM IST
ಅಫ್ಘಾನಿಸ್ತಾನ ಬಳಿಕ ಹಾಸನದಲ್ಲೂ ಭೂಕಂಪನ: ಬೆಚ್ಚಿಬಿದ್ದ ಜನತೆ

ಸಾರಾಂಶ

*  ಜನರಲ್ಲಿ ತೀವ್ರ ಆತಂಕ ಮೂಡಿಸಿದ ಭೂಕಂಪನ *  ಭೂ ಕಂಪನದ ಅನುಭವ ಆಗುತ್ತಲೇ‌ ಮನೆಯಿಂದ ಹೊರಗೆ ಓಡಿ ಬಂದ ಜನರು  *  ಗಾಢ ನಿದ್ರೆಯಲ್ಲಿದ್ದವರಿಗೆ ಶಾಕ್ ನೀಡಿದ ಲಘು ಕಂಪನ   

ಹಾಸನ(ಜೂ.23):  ಜಿಲ್ಲೆಯ ಅರಕಲಗೂಡು ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು(ಗುರುವಾರ) ಭೂಮಿ ಕಂಪಿಸಿದ ಅನುಭವವಾಗಿದೆ. ಗಾಢ ನಿದ್ರೆಯಲ್ಲಿದ್ದವರಿಗೆ ಲಘು ಕಂಪನ ಶಾಕ್ ನೀಡಿದೆ. ದೊಡ್ಡ ರೀತಿಯ ಶಬ್ಧ ಬಂದು ಬಳಿಕ 4.38 ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಅಂತ ಮಾಹಿತಿ ಲಭ್ಯವಾಗಿದೆ.

ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಅರಕಲಗೂಡು ಪಟ್ಟಣ, ಹನೆಮಾರನಹಳ್ಳಿ, ಕಾರಳ್ಳಿ ಗ್ರಾಮಗಳು ಹಾಗೂ ಹೊಳೆನರಸೀಪುರ ತಾಲೂಕಿನಲ್ಲೂ ಭೂಮಿ ಕಂಪಿಸಿದೆ. ಅರಕಲಗೂಡು ಪಟ್ಟಣದ ಚಿಟ್ನಳ್ಳಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ, ಹೊಳೆನರಸೀಪುರದ ಅರಕಲಗೂಡು ರಸ್ತೆಯ ಬಡಾವಣೆಯಲ್ಲಿ ಭೂಮಿ ನಡುಗಿದೆ.

ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ, 950 ಜನರ ಸಾವು, ಸರ್ಕಾರದ ಹೇಳಿಕೆ!

ಭೂ ಕಂಪನದ ಅನುಭವ ಆಗುತ್ತಲೇ‌ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ನಿನ್ನೆಯಷ್ಟೇ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪನದ ಬಳಿಕ ಇದೀಗ ಹಾಸನ ಜಿಲ್ಲೆಯಲ್ಲೂ ಭೂಕಂಪನದ ಭೀತಿ ಹುಟ್ಟಿಸಿದೆ.

PREV
Read more Articles on
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ