ಚಿತ್ರದುರ್ಗ: ರಘು ಆಚಾರ್‌ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ, ಕಂತೆ ಕಂತೆ ಹಣ ಪತ್ತೆ..!

Published : May 10, 2023, 07:52 AM IST
ಚಿತ್ರದುರ್ಗ: ರಘು ಆಚಾರ್‌ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ, ಕಂತೆ ಕಂತೆ ಹಣ ಪತ್ತೆ..!

ಸಾರಾಂಶ

ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು ಆಧರಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ  50 ಲಕ್ಷ ರೂ. ನಗದು ಸಿಕ್ಕಿದೆ. ಕವರ್‌ನಲ್ಲಿ ಹಣವನ್ನ ಇಡಲಾಗಿತ್ತು. ಒಟ್ಟು 58,83,000 ರೂ. ಹಣವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 

ಚಿತ್ರದುರ್ಗ(ಮೇ.10): ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ. 

ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು ಆಧರಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ  50 ಲಕ್ಷ ರೂ. ನಗದು ಸಿಕ್ಕಿದೆ. ಕವರ್‌ನಲ್ಲಿ ಹಣವನ್ನ ಇಡಲಾಗಿತ್ತು. ಒಟ್ಟು 58,83,000 ರೂ. ಹಣವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ 239 ಲೀಟರ್‌ ಬೀಯರ್‌ ಹಾಗೂ 9 ಲೀಟರ್‌ ಐಎಂಎಲ್‌ ಪತ್ತೆಯಾಗಿದೆ. 

ಚಿತ್ರದುರ್ಗದಲ್ಲಿ ಸೌಭಾಗ್ಯ ನಿವೃತ್ತಿ ಕಾಂಗ್ರೆಸ್‌ಗೆ ಲಾಭ ಆಗುತ್ತಾ?: ತಿಪ್ಪಾರೆಡ್ಡಿ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್

ರಾತ್ರಿ 8 ರ ಸುಮಾರಿಗೆ ಮನೆ ಪ್ರವೇಶಿಸಿದ ಅಧಿಕಾರಿಗಳು 11 ಗಂಟೆಯವರೆಗೆ ಶೋಧ ನಡೆಸಿದ್ದಾರೆ.  

PREV
Read more Articles on
click me!

Recommended Stories

Share Market: ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!
ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?