ಮೀಟರ್ ಬೋರ್ಡ್, ಎಲೆಕ್ಟ್ರಿಕಲ್ ವೈರ್, ವಿದ್ಯುತ್ ಉಪಕರಣಗಳನ್ನ ಹಿಡಿದು ವಿಭಿನ್ನ ರೀತಿಯಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ವರದಿ- ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು ( ಡಿ.5): ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಟರ್ ಬೋರ್ಡ್, ಎಲೆಕ್ಟ್ರಿಕಲ್ ವೈರ್, ವಿದ್ಯುತ್ ಉಪಕರಣಗಳನ್ನ ಹಿಡಿದು ವಿಭಿನ್ನ ರೀತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಗುತ್ತಿಗೆದಾರರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರ ಕೈಗೊಂಡಿರುವ ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಮಾತಿಗೂ ಕ್ಯಾರೆ ಎನ್ನದ ಬೆಸ್ಕಾಂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಬೆಸ್ಕಾಂ ಅಧಿಕಾರಿಗಳ ಬೇಜಾವ್ದಾರಿ ನಡೆಯಿಂದ ಬೆಸ್ಕಾಂ ಗ್ರಾಹಕರು, ಗುತ್ತಿಗೆದಾರರು ಹಾಗೂ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಿರ್ಲಕ್ಷ್ಯವಹಿಸುತ್ತಿರುವ ಎಲ್ಲಾ ಬೆಸ್ಕಾಂ ಅಧಿಕಾರಿಗಳನ್ನ ಅಮಾನತು ಮಾಡಬೇಕು. ಜೊತೆಗೆ ಎಲ್ಲ ಸಮಸ್ಯೆಗಳು ಬಗೆಹರಿಯಬೇಕು. ಸ್ಥಳಕ್ಕೆ ಇಂಧನ ಸಚಿವರು ಬರಬೇಕು ಎಂದು ರಾಜ್ಯಾಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.
3 ತಿಂಗಳು ವಿದ್ಯುತ್ ಬಿಲ್ ಕಟ್ಟದಿದ್ದರೆ ನಿಮ್ಮ ಮನೆಯ ವಿದ್ಯುತ್ ಸಂಪರ್ಕ ಲೈಸೆನ್ಸ್ ರದ್ದು
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಬೇಡಿಕೆಗಳೇನು?