ಚಾಮರಾಜನಗರ: ವಕ್ರದಂತ ಹೊಂದಿದ್ದ ಕಾಡಾನೆ ಸಾವು, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಳೇಬರ ಪತ್ತೆ!

Published : Nov 05, 2024, 10:17 AM IST
ಚಾಮರಾಜನಗರ: ವಕ್ರದಂತ ಹೊಂದಿದ್ದ ಕಾಡಾನೆ ಸಾವು, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಳೇಬರ ಪತ್ತೆ!

ಸಾರಾಂಶ

ಜನವಸತಿ ಪ್ರದೇಶದಲ್ಲಿ ಸಂಚಾರ ಮಾಡುತ್ತಿದ್ದ ಕಾಡಾನೆಯನ್ನ ಅರಣ್ಯಾಧಿಕಾರಿಗಳು ಮತ್ತೊಂದೆಡೆಗೆ ಡ್ರೈವ್ ಮಾಡಿದ್ದರು. ಯಳಂದೂರು ವನ್ಯಜೀವಿ ವಲಯದ ಕಡಿತಾಳಕಟ್ಟೆ ಗಸ್ತಿನ ವೀರನಕಾನು ಎಂಬಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.  

ಚಾಮರಾಜನಗರ(ನ.05):  ಆಗಾಗ್ಗೆ ಬಿಳಿಗಿರಿರಂಗನ ಬೆಟ್ಟದ ಪೋಡುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವನ್ನಪ್ಪಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಸಾವನ್ನಪ್ಪಿದೆ. ಮಿಸ್ಟರ್ ಬಿಆರ್‌ಟಿ ಎಂದೇ ಖ್ಯಾತಿ ಗಳಿಸಿತ್ತು ಈ ಕಾಡಾನೆ. 

ಜನವಸತಿ ಪ್ರದೇಶದಲ್ಲಿ ಸಂಚಾರ ಮಾಡುತ್ತಿದ್ದ ಕಾಡಾನೆಯನ್ನ ಅರಣ್ಯಾಧಿಕಾರಿಗಳು ಮತ್ತೊಂದೆಡೆಗೆ ಡ್ರೈವ್ ಮಾಡಿದ್ದರು. ಯಳಂದೂರು ವನ್ಯಜೀವಿ ವಲಯದ ಕಡಿತಾಳಕಟ್ಟೆ ಗಸ್ತಿನ ವೀರನಕಾನು ಎಂಬಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.  

ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆ?: ದಂತಗಳು ನಾಪತ್ತೆ

ಕಾಡಾನೆಯ ಮರಣೋತ್ತರ ಪರೀಕ್ಷೆಯನ್ನ ವೈದ್ಯರು ನಡೆಸಿದ್ದಾರೆ. ಸ್ವಾಭಾವಿಕ ಸಾವು ಎಂದು ಖಾತ್ರಿಯಾಗಿದೆ. ಅರಣ್ಯ ಸಿಬ್ಬಂದಿ ಮುಂದಿನ ಕ್ರಮ ವಹಿಸಲಿದ್ದಾರೆ.  

PREV
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ