ಗ್ರಾಮಕ್ಕೆ ನುಗ್ಗಿ ಎಮ್ಮೆ, ಹಸುಗಳ ತುಳಿದು ಕೊಂದ ಆನೆ

Kannadaprabha News   | Asianet News
Published : Mar 06, 2020, 10:39 AM IST
ಗ್ರಾಮಕ್ಕೆ ನುಗ್ಗಿ ಎಮ್ಮೆ, ಹಸುಗಳ ತುಳಿದು ಕೊಂದ ಆನೆ

ಸಾರಾಂಶ

ಗ್ರಾಮಕ್ಕೆ ನುಗ್ಗಿದ ಕಾಡಾನೆಯೊಂದು ಹಸು ಎಮ್ಮೆಗಳನ್ನು ತುಳಿದು ಕೊಂದಿದೆ. ಕಾಡಾನೆ ಪುಂಡಾಟಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. 

ರಾಮನಗರ [ಮಾ.06]:  ಕಾಡಿನಿಂದ ನಾಡಿಗೆ ಬಂದ ಆನೆಯಿಂದು ಹಸು ಎಮ್ಮೆಗಳ ಮೇಲೆ ದಾಳಿ ಮಾಡಿ ತುಳಿದು ಕೊಂದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಸಮೀಪದ ಗ್ರಾಮಗಳಲ್ಲಿ ಪುಂಡಾನೆ ದಾಂಧಲೆ ಮಾಡಿದೆ. 

ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಕ್ಕೆ ನುಗ್ಗಿದ ಆನೆ ಸಾಸಲಪುರದಲ್ಲಿ ಎರಡು ಹಸುಗಳನ್ನು ತುಳಿದು ಕೊಂದಿದೆ. ಮರದದೊಡ್ಡಿ ಗ್ರಾಮದಲ್ಲಿ ಎಮ್ಮೆಯೊಂದನ್ನು ತುಳಿದು ಕೊಂದಿದೆ. 

ಅಮ್ಮ ಮರಿಯಾನೆಗೆ ಜನ್ಮ ನೀಡಿದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾದಾಗ!...

ಅಲ್ಲದೇ ಮಲ್ಲೇಗೌಡನ ದೊಡ್ಡಿಯಲ್ಲಿ ಬೈಕ್ ಒಂದನ್ನು ಜಖಂಗೊಳಿಸಿದೆ. ಈ ವೇಳೆ ಸಾರ್ವಜನಿಕರು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಗಂಟೆಗೂ ಹೆಚ್ಚು ಕಾಲ ಹರಸಾಹಸ ಮಾಡಿದ್ದಾರೆ. 

ಆನೆ ಹಾವಳಿಗೆ ಗ್ರಾಮಸ್ಥರು ತತ್ತರಿಸಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV
click me!

Recommended Stories

ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ