ಸೋಂಕು ಹೆಚ್ಚಾಗುವ ಭೀತಿ: ಮತ್ತೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ..!

Kannadaprabha News   | Asianet News
Published : Jul 14, 2021, 11:06 AM IST
ಸೋಂಕು ಹೆಚ್ಚಾಗುವ ಭೀತಿ: ಮತ್ತೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ..!

ಸಾರಾಂಶ

* ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿ * ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ *  ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಅವಕಾಶ  

ಚಿಕ್ಕಬಳ್ಳಾಪುರ(ಜು.14): ನಂದಿಗಿರಿಧಾಮ ವೀಕ್ಷಣೆಗೆ ವಾರಾಂತ್ಯದಲ್ಲಿ ನಿಷೇಧ ಹೇರಲಾಗಿದೆ. 

ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ನೆರೆ ಹೊರೆ ಜಿಲ್ಲೆಗಳಿಂದ ಪ್ರವಾಸಿಗರ ದಟ್ಟಣೆ ಹೆಚ್ಚಾಗಿತ್ತು. ಆದರೆ ಜನರು ಕೊರೋನಾ ನಿಯಮ ಪಾಲಿಸಲು ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿಯಾಗಿತ್ತು. 

ವೀಕೆಂಡ್ ಹಿನ್ನೆಲೆ : ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು

ಹೀಗಾಗಿ ಜಿಲ್ಲಾಡಳಿತವು ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಲಭ್ಯವಿದೆ.
 

PREV
click me!

Recommended Stories

Bidadi Project: ಅಂಡಮಾನ್‌ ಪರಿಸರ ಉಳಿಸಿ ಎಂದಿದ್ದ ರಾಹುಲ್ ಗಾಂಧಿಗೆ ಪತ್ರ ಬರೆಯುವೆ: ಎಚ್‌ಡಿಕೆ
SIR ಮೂಲಕ ಮತದಾರರ ಹಕ್ಕು ಕಸಿಯಲು ಅವಕಾಶ ನೀಡಲ್ಲ: ಸಲೀಂ ಅಹ್ಮದ್ ಎಚ್ಚರಿಕೆ